“ಕೆಂಪೇಗೌಡರ 514ನೇ ಜಯಂತಿ ಆಚರಣೆ.”
1 min read
ದಿನಾಂಕ 27/06/2022ರ ಮಂಗಳವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ದೀನ್ ದಯಾಳ್ ಉಪಾಧ್ಯಾಯ್ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ 514ನೇ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೂಡಿಗೆರೆಯ ಗಾಯಕಿ ಸುಚಿತ್ರ ಪ್ರಸನ್ನ ಅವರು ನಾಡಗೀತೆಯನ್ನು ಪ್ರಸ್ತುತಪಡಿಸಿದರು.

ಈ ಕಾರ್ಯಕ್ರಮದ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಬಣಕಲ್ ಹೋಬಳಿ ಅಧ್ಯಕ್ಷರಾದ ಆದರ್ಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರು ನೆರವೇರಿಸಿ ಉದ್ಘಾಟನಾ ನುಡಿಗಳನ್ನಾಡಿದರು. ಜೊತೆಗೆ ಸರ್ಕಾರಿ ಕಾರ್ಯಕ್ರಮಗಳನ್ನು ಅವಮಾನಿಸುವ ಕಾರ್ಯ ಮಾಡಬೇಡಿ ಎಂದು ತಹಶೀಲ್ದಾರ್ ವಿರುದ್ಧ ಗುಡುಗಿದರು.

ಸಮಯ ಪಾಲನೆ ಮತ್ತು ಗಣ್ಯ ವ್ಯಕ್ತಿಗಳಿಗೆ ಸರಿಯಾಗಿ ಕರೆಯೋಲೆ ನೀಡದಿರುವುದು ಮತ್ತು ಕಾರ್ಯಕ್ರಮದಲ್ಲಿ ಎತ್ತಲೋ ಗಮನ ಹರಿಸಿ ಕಡತ ಪರಿಶೀಲನೆ ನಡೆಸಿದ ಕಾರಣಕ್ಕೆ ಮೂಡಿಗೆರೆ ತಾಲ್ಲೂಕಿನ ತಹಶೀಲ್ದಾರ್ ತಿಪ್ಪೇಸ್ವಾಮಿ ಅವರಿಗೆ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಂಪೇಗೌಡ ಒಕ್ಕಲಿಗರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಬಕ್ಕಿ ಪ್ರಸಾದ್ ಕೆಂಪೇಗೌಡರ ಜೀವನದ ಬಗ್ಗೆ,ಆಡಳಿತದ ಬಗ್ಗೆ ಮಾತನಾಡಿದರು.


ಈ ಕಾರ್ಯಕ್ರಮದಲ್ಲಿ ಕೆಂಪೇಗೌಡ ಒಕ್ಕಲಿಗ ವೇದಿಕೆಯ ಅಧ್ಯಕ್ಷರಾದ ಬ್ರಿಜೇಶ್,ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಎಸ್.ಜಯರಾಮ್,ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ,ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಜಿ.ಸುರೇಂದ್ರ,ಡಿ.ಕೆ.ಲಕ್ಷ್ಮಣ ಗೌಡ,ಕೆ.ಸಿ.ರತನ್,ಮೂಡಿಗೆರೆ ತಾಲ್ಲೂಕು ದಂಡಾಧಿಕಾರಿಗಳಾದ ತಿಪ್ಪೇಸ್ವಾಮಿ,ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಹರ್ಷಕುಮಾರ್ ಹಾಗೂ ಅನೇಕ ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ವಿವಿಧ ಇಲಾಖೆಯ ಅಧಿಕಾರಿಗಳು,ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೊ ನ್ಯೂಸ್,ಅವಿನ್ ಟಿವಿ.
9448305990.











