लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ದಾನಿಗಳ ಸಹಕಾರದೊಂದಿಗೆ ಕ.ರ.ವೇಯಿಂದ ಹಿರಿಯ ಪ್ರಾಥಮಿಕ ಶಾಲೆಗೆ ಬರೆಯುವ ಪುಸ್ತಕ ಮತ್ತು ಪರಿಕರಗಳ ವಿತರಣೆ.”

1 min read

ಕೊಡಗು ಜಿಲ್ಲೆಯ ಶನಿವಾರ ಸಂತೆ ಹೋಬಳಿಯ ಬಸವನಕೊಪ್ಪ ಗ್ರಾಮದ ಪಕ್ಕದಲ್ಲಿರುವ ಹಾಸನ ಜಿಲ್ಲೆಯ ಗಡಿ ಭಾಗಕ್ಕೆ ಸೇರಿದ ಸಕಲೇಶಪುರ ತಾಲ್ಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಮತ್ತು ಪರಿಕರಗಳನ್ನು ದಾನಿಗಳಾದ ಸಿಸ್ಟರ್ ಪ್ರಸಿಲ್ಲಾ ಅವರಿಂದ ವಿತರಿಸಲಾಯಿತು. ಸಿಸ್ಟರ್ ಪ್ರೇಸಿಲ್ಲಾ ರವರು ಮಾತನಾಡಿ ನಾನು ಇದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು ಈ ಶಾಲೆಯಲ್ಲಿ ಓದಿ ಇಂದು ನಾನು ಕಿನ್ಯಾ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಹಾಗಾಗಿ ನಾನು ಓದಿದ ಶಾಲೆಗೆ ನನ್ನ ಕೈಲಾದ ಸಹಾಯ ಮಾಡಬೇಕೆಂದು ಈ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಪರಿಕಾರಗಳನ್ನು ವಿತರಿಸುತ್ತಿದ್ದೇನೆ ಹಾಗೂ ಸಿಹಿಯನ್ನು ವಿತರಿಸುತ್ತಿದ್ದೇನೆ ಎಂದು ತಿಳಿಸಿದರು.

ಹಾಗೂ ವಿದ್ಯಾರ್ಥಿಗಳು ಚೆನ್ನಾಗಿ ಕಲಿತು ಮುಂದೆ ಬರಬೇಕು ಶಾಲೆಗೆ ಒಳ್ಳೆಯ ಹೆಸರು ತಂದುಕೊಡಬೇಕು ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತಂದುಕೊಡಬೇಕಾಗಿ ತಿಳಿಸಿದರು.

ಹಾಗೂ ಇದೇ ಸಂದರ್ಭದಲ್ಲಿ ಕರವೇ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ರಾಮನಹಳ್ಳಿ ಪ್ರವೀಣ್ ಮಾತನಾಡಿ ನಾವು ಪ್ರತಿ ವರ್ಷದಂತೆ ದಾನಿಗಳ ಸಹಕಾರದೊಂದಿಗೆ ಶಾಲೆಗಳಿಗೆ ಪುಸ್ತಕಗಳು ಮತ್ತು ಪರಿಕಾರಗಳನ್ನು ವಿತರಿಸುತ್ತಿದ್ದೇವೆ, ಯಾಕೆಂದರೆ ಸರ್ಕಾರಿ ಶಾಲೆಯ ಮಕ್ಕಳಿಗೆ ಓದಲು ಉತ್ತೇಜನ ಕೊಡುವ ಮೂಲಕ ಪ್ರತಿ ವರ್ಷ ಪುಸ್ತಕ ಮತ್ತು ಪರಿಕಾರಗಳು ವಿತರಿಸುವ ಕೆಲಸ ನಡೆಯುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯಾದ ಮಂಜುಳರವರು ಮಾತನಾಡಿ ಪುಸ್ತಕಗಳನ್ನು ವಿತರಿಸುತ್ತಿರುವ ಸಿಸ್ಟರ್ ಪ್ರಸಿಲ್ಲಾರವರಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸಿದರು ನಮ್ಮ ಶಾಲೆಯಲ್ಲಿ ಓದಿ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಇದು ನಮ್ಮ ಶಾಲೆಗೆ ಹೆಮ್ಮೆಯ ವಿಚಾರ ಎಂದು ತಿಳಿಸಿದರು ಹಾಗೂ ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಹಾಗೂ ಕರವೇ ತಾಲೂಕು ಕಾರ್ಯದರ್ಶಿ ರಾಮನಹಳ್ಳಿ ಪ್ರವೀಣ್ ಹಾಗೂ ಪುಸ್ತಕದಾನಿಗಳಾದ ಸಿಸ್ಟರ್ ಪ್ರಸಿಲ್ಲಾ ಹಾಗೂ ಮುಖ್ಯ ಶಿಕ್ಷಕಿಯಾದ ಮಂಜುಳಾ ರವರು ಹಾಗೂ ಸಹ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *