लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಗುರು ವಿಷ್ಣು,ಗುರುದೇವೋ ಮಹೇಶ್ವರ,ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರುವೇ ನಮಃ : ಮೋಹನ್ ರಾಜಣ್ಣ.”

1 min read

ಶಿಕ್ಷಕವೃತ್ತಿ ಇತರ ವೃತ್ತಿ ಗಿಂತ ಪವಿತ್ರವಾದದ್ದಲ್ಲದೇ ಶ್ರೇಷ್ಠತೆಗೆ ಸಾಕ್ಷಿ ಎಂದು ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಡಾ. ಮೋಹನ್ ರಾಜಣ್ಣ ಹೇಳಿದರು.

ಅವರು ದಿನಾಂಕ 05/07/2023ರ ಬುಧವಾರದಂದು ಚಿಕ್ಕಮಗಳೂರು ಜಿಲ್ಲೆಯ,ಕಳಸ ತಾಲ್ಲೂಕಿನ,ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಹಿರಿಯ ಪ್ರಾಥಮಿಕ )ನಲ್ಲಿ ಶಿಕ್ಷಕ ಪುರುಷೋತ್ತಮ್ ರವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಶಿಕ್ಷಣ ಪ್ರತಿಯೊಬ್ಬರ ಹಕ್ಕು ಅದನ್ನು ಪಡೆದವರು ಸ್ವಾವಲಂಬಿ ಬದುಕು ಕಟ್ಟಿ ಕೊಳ್ಳುವರು. ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ತಂದು ತಮ್ಮ ಸ್ವಾವಲಂಬಿ ಬದುಕು ಕಟ್ಟಿ ಕೊಂಡಾಗಲೇ ಶಿಕ್ಷಕರಿಗೆ ಬಹು ದೊಡ್ಡ ಗೌರವ ಸಿಕ್ಕಿದoತಾಗುತ್ತದೆ ಎಂದರು.

ವರ್ಗಾವಣೆಗೊಂಡ ಶಿಕ್ಷಕ ಪುರುಷೋತ್ತಮ್ ಪುಷ್ಪಗಿರಿ ಜ್ಞಾನ ರತ್ನ” ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಕರ್ತವ್ಯ ನಿರ್ವಹಿಸುವ ಜಾಗದಲ್ಲಿ ದೊರೆತ ಪ್ರೀತಿ,ವಿಶ್ವಾಸ ಹಾಗೂ ಸ್ಪಂದನೆ ಯನ್ನು ಎಂದಿಗೂ ಮರೆಯಲಾಗದು. ಉತ್ತಮ ಅನುಭವ ನೀಡಿದವರ ಋಣ ತೀರಿಸಲಾಗದು ಮತ್ತೊಮ್ಮೆ ಅವಕಾಶ ದೊರೆತರೆ ಮತ್ತೊಮ್ಮೆ ಕಳಸಕ್ಕೆ ಬರುತ್ತೇನೆ. ವರ್ಗಾವಣೆಯಾಗಿದ್ದೇನೆ ಅಷ್ಟೇ ಮಾನಸಿಕವಾಗಿ ಇಲ್ಲಿಯೇ ಇದ್ದೇನೆ ಇಲ್ಲಿಯವರ ಹೃದಯ ವಂತಿಕೆ ಶಾಶ್ವತವಾಗಿ ಉಳಿಯಲಿದೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಕೊಟ್ಟರೆ ಅದೇ ನೈಜ ಸನ್ಮಾನ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಶಿಕ್ಷಕಿ ಶಶಿಕಲಾ ಸರ್ಕಾರಿ ಶಾಲೆ ಎಂಬುದು ದೇವಾಲಯ ಇದ್ದಂತೆ ಸದಾ ನಿಷ್ಠೆ ಯಿಂದ ಪ್ರಾಮಾಣಿಕ ವಾಗಿ ದುಡಿದು ಸಮಾಜದಲ್ಲಿ ಉತ್ತಮ ಹೆಸರು ಗಳಿಸಿಕೊಳ್ಳಲು ಸಹಕಾರಿ ಶಾಲೆ ಯಲ್ಲಿ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿ ಕೊಳ್ಳುವ ಮೂಲಕ ಮಕ್ಕಳ ಉತ್ತಮ ಭವಿಷ್ಯ ವನ್ನು ಕಟ್ಟಿಕೊಳ್ಳುವ ಶಕ್ತಿ ಶಿಕ್ಷಕರ ಕೈಯಲ್ಲಿರುತ್ತೆ ಎಂದು ತಿಳಿಸಿದರು.

ಕರ್ನಾಟಕ ಪಬ್ಲಿಕ್ ಶಾಲೆ ಯ ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕರ ಶಿವಕುಮಾರ್ ಸ್ವಾಮಿ ಮತ್ತು ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ವಿಶುಕುಮಾರ್ ಮತ್ತು ನಗ್ಮಾಬಾನು,ಲಲಿತ ಮತ್ತು ವಿದ್ಯಾರ್ಥಿಗಳು ಶಿಕ್ಷಕರು ತಮ್ಮ ಅನಿಸಿಕೆ ಗಳನ್ನು ವ್ಯಕ್ತಪಡಿಸಿದರು.

ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ ದ ವತಿಯಿಂದ ಶಿಕ್ಷಕ ಪುರುಷೋತ್ತಮ್ ರವರಿಗೆ “ಪುಷ್ಪಗಿರಿ ಜ್ಞಾನ ರತ್ನ” ಪ್ರಶಸ್ತಿ ನೀಡಿ ಗೌರವಸಿದರು.
ಶಿಕ್ಷಕರಾದ ವೀಣಾಶೆಣೈ,ನಾಗರತ್ನ,ನಗ್ಮಾಬಾನು,ರೇಖಾ,ಶ್ರೀದೇವಿ, ಲಲಿತ,ಶೈಲಾ,ಅಂಕಿತಾ,ಅಂಜನಾ,ಭಾರ್ಗವಿ,ರಂಜಿತಾ ಕುಟ್ಟಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೊದಲಿಗೆ ರಂಜಿತಾ ಕುಟ್ಟಿ ಸ್ವಾಗತಿಸಿ. ಕಾರ್ಯಕ್ರಮ ನಿರೂಪಿಸಿದರು.
ಲಲಿತ ವಂದಿಸಿದರು.

ಬರಹ ಕೃಪೆ.

ಮೋಹನ್ ರಾಜಣ್ಣ.

ಸಂಸ್ಥಾಪಕರು,ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ.

ಗೋಣಿಬೀಡು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *