“ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ.”
1 min read
ದಿನಾಂಕ 08/07/2023 ರಂದು ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ರವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಈ ಸಭೆಯಲ್ಲಿ ನೂತನ ಸಚಿವರಾಗಿ ಆಯ್ಕೆಯಾದ ಶ್ರೀ ದಿನೇಶ್ ಗುಂಡೂರಾವ್ ರವರನ್ನು ಬ್ಲಾಕ್ ಕಾಂಗ್ರೆಸ್, ಕ್ರಿಶ್ಚಿಯನ್ ಕ್ಯಾಥೊಲಿಕ್ ಸಮುದಾಯ ಸಮಿತಿ, ಮಡಂತ್ಯಾರು ಕೃಷಿಪತ್ತಿನ ಸಹಕಾರಿ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಹಿಸಿದ್ದರು. ಮಾಜಿ ಶಾಸಕ ಕೆ.ವಸಂತ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಕೆ.ಗಂಗಾಧರ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ, ಕೆಪಿಸಿಸಿ ಸದಸ್ಯ ಕೇಶವ ಗೌಡ, ಟಿ.ಎಮ್.ಶಾಹಿದ್ ತೆಕ್ಕಿಲ್, ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಾರ್ಯದರ್ಶಿ ಎ.ಸಿ.ಮ್ಯಾಥ್ಯೂ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ, ವಿವಿಧ ಘಟಕದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.












