“ಅಪಘಾತ.”
1 min read
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಚಕ್ಕಮಕ್ಕಿಯಲ್ಲಿ ಕಾರು ಮತ್ತು ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.
ಮೂಡಿಗೆರೆಯಿಂದ ಕೊಟ್ಟಿಗೆಹಾರದ ಕಡೆ ಸಾಗುತ್ತಿದ್ದ ಬೈಕ್ ಮತ್ತು ಕೊಟ್ಟಿಗೆಹಾರದಿಂದ ಮೂಡಿಗೆರೆಯ ಕಡೆ ಸಾಗುತ್ತಿದ್ದ ಕಾರಿನ ನಡುವೆ ಈ ಅಪಘಾತ ನಡೆದಿದ್ದು
ಬೈಕ್ ಸವಾರನ ಕಾಲು ತುಂಡಾಗಿದ್ದು ತೊಡೆಯ ಮೂಳೆ ಹೊರ ಬಂದಿದೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ ಸವಾರನನ್ನು ಬಣಕಲ್ ನ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಆರಿಫ್ ಅವರು ಅಂಬುಲೆನ್ಸ್ ನಲ್ಲಿ ಮೂಡಿಗೆರೆ ಎಂ.ಜಿ.ಎಂ.ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೈಕ್ ಸವಾರ ಮೂಡಿಗೆರೆ ತಾಲ್ಲೂಕಿನ,ಗೆಂಡೇಹಳ್ಳಿಯ ಮುಳ್ಳೇಗೌಡ ಅವರ ಮಗ ಹೇಮಂತ್ ಎಂದು ತಿಳಿದು ಬಂದಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.