“ಅನಾಥ ಶವ ಪತ್ತೆ.”
1 min read
ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ,ಬೆಟ್ಟಗೆರೆ ಸಮೀಪದ ಹ್ಯಾರಗುಡ್ಡೆ ಬಸ್ ನಿಲ್ದಾಣದಲ್ಲಿ
ಅನಾಥ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಸೋಮ (60) ಹೊಸದುರ್ಗದಿಂದ ಕೂಲಿ ಕೆಲಸಕ್ಕೆ ಬಂದಿದ್ದ ಎಂದು ಗುರುತಿಸಲಾಗಿದೆ.
ಬಣಕಲ್ ಠಾಣೆಯ ಪೊಲೀಸ್ ಠಾಣಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು ಮದ್ಯಪಾನದಿಂದ ಸಾವು ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ನಂತರ ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕಳಿಸಲಾಗಿದ್ದು ವೈದ್ಯಕೀಯ ತಪಾಸಣೆ ನಂತರ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.
ಈ ಸಂದರ್ಭದಲ್ಲಿ ಬಣಕಲ್ ನ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಆರಿಫ್,ಸಮಾಜ ಸೇವಕರಾದ ಅಬ್ದುಲ್ ರೆಹಮಾನ್, ಬಣಕಲ್ ಪೊಲೀಸ್ ಠಾಣೆಯ ಪಿ.ಎಸ್.ಐ ಜಂಬೂರಾಜ್ ಮಹಾಜನ್ ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.