“ದಾರಿ ಕಾಣದಾಗಿದೆ ನಯನ ಮೋಟಮ್ಮನವರೇ.”
1 min read
ಸೂಕ್ತ ರಸ್ತೆ ಇಲ್ಲದ ವಯೋವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಂದಿಗೂ ಜೀವಂತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ ನಡೆದಿದೆ.

70 ವರ್ಷದ ಶೇಷಮ್ಮರನ್ನು ಕುಟುಂಬಸ್ಥರು ಸುಮಾರು 1 ಕಿ.ಮೀ.ಜೋಳಿಗೆಯಲಿ, ಹೊತ್ತು ತಂದು ಆಸತ್ರೆಗೆ ದಾಖಲಿಸಿದ್ದಾರೆ. ಸೂಕ್ತ ರಸ್ತೆ ಇಲ್ಲದ ಕಾರಣ ಜೋಳಿಗೆಯಲ್ಲಿ ಹೊತ್ತು ತಂದಿದ್ದಾರೆ. ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆ 30-40 ಜನಸಂಖ್ಯೆಯ ಕಾಡಂಚಿನ ಕುಗ್ರಾಮಗಳಿವೆ, ಆದರೆ ಓಡಾಡಲು ಸೂಕ್ತ ರಸ್ತೆ ಇಲ್ಲ.


ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದರೆ 4 ಕಿ.ಮೀ. ಆಗುತ್ತದೆ. 3-4 ಕಿ.ಮೀ. ಬಂದರೆ ಆಟೋ ಸಿಗುತ್ತೆ ಆದರೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡುತ್ತಿಲ್ಲ, ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದರು ಅಧಿಕಾರಿಗಳು, ಜನನಾಯಕರು ಈವರೆಗೂ ಯಾರೂ ಕೂಡ ಸ್ಪಂದಿಸಿಲ್ಲ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.