लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿನಾಂಕ 12/07/2023 ಬುಧವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಇದರ ವತಿಯಿಂದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿಯವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಇರುವ ಬ್ಲಾಕ್ ಕಾಂಗ್ರೆಸ್ ಕಚೇರಿಯ ಮುಂಭಾಗ ಮೌನ ಪ್ರತಿಭಟನೆಯು ಬಹಳ ಯಶಸ್ವಿಯಾಗಿ ನಡೆಯಿತು.


ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷರಾದ ಬಿ ಅಶ್ರಫ್ ನೆರಿಯರವರು ನೆರೆದಿರುವ ಎಲ್ಲರನ್ನೂ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಕೆ. ಗಂಗಾಧರ ಗೌಡ, ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೆ. ಶೈಲೇಶ್ ಕುಮಾರ್ ಮತ್ತು ರಂಜನ್ ಜಿ ಗೌಡ, ಕೆಪಿಸಿಸಿ ಸದಸ್ಯರಾದ ಕೇಶವ ಗೌಡ ಬೆಲಾಲು, ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಎಸಿ ಮಾಥ್ಯು, ಕಾಂಗ್ರೆಸ್ ನಾಯಕರಾದ ಸುಂದರಗೌಡ ಉಜಿರೆ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಸೆಬೆಸ್ಟಿನ್ ಮತ್ತು ವಿನ್ಸೆಂಟ್, ಹನೀಫ್ ಬಿಎಂ ಉಜಿರೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬಿ.ಎಮ್.ಹಮೀದ್ ಉಜಿರೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಗುರುವಾಯನಕೆರೆ, ಕಾಂಗ್ರೆಸ್ ಮುಖಂಡರಾದ ಯು.ಎ.ಹಮೀದ್ ಉಜಿರೆ, ಮಹಿಳಾ ಕಾಂಗ್ರೆಸ್ಸಿನ ಶ್ರೀಮತಿ ಹಾಜೀರ, ಉಷಾ ಶರತ್, ಎಸ್ಸಿ ಘಟಕದ ಚಂದು ಎಲ್, ವಸಂತ ಬಿಕೆ, ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕರದ ಪ್ರಶಾಂತ ವೇಗಸ್, ಬೆಳ್ತಂಗಡಿ ಬ್ಲಾಕ್ ಕಾರ್ಮಿಕ ಅಧ್ಯಕ್ಷರಾದ ಮೆಹಬೂಬ್ ಬೆಳ್ತಂಗಡಿ, ಎಸ್ ಸಿ ಘಟಕದ ಪ್ರಭಾಕರ್ ಶಾಂತಿಗೌಡ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಭರತ್ ಬಂಗಾಡಿ, ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಂ ಕೊಕ್ಕಡ, ನೆರಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಪಿ, ಗ್ರಾಮ ಪಂಚಾಯತ್ ಸದಸ್ಯರಾದ ಮುಹಮ್ಮದ್ ಕಾಜೂರು, ಶಾಹುಲ್ ಹಮೀದ್ ಮಲ್ಲಿಗೆ ಮನೆ, ಹಿರಿಯ ಕಾಂಗ್ರೆಸ್ಸಿಗರಾದ ರಾಮಚಂದ್ರಗೌಡ, ಮಧುಕರ್ ಬಂಗಾಡಿ, ವಿನ್ಸೆಂಟ್ ಮಡಂತ್ಯಾರು, ನೇಮಿರಾಜ್ ಕಿಲ್ಲೂರು, ನಾರಾಯಣ ಗೌಡ ಮುಂಡಾಜೆ, ಜಯಶೀಲ, ಕುಶಾಲಪ್ಪ ಗೌಡ, ಕಾಂಗ್ರೆಸ್ ನಿವೃತ್ತ ಸೈನಿಕ ಘಟಕದ ಮುಹಮ್ಮದ್ ರಫೀಕ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಗೆ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪುರವರು ನೆರೆದಿರುವ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಬರಹ ಕೃಪೆ.

ಶಾಹಿನ್.ಉಜಿರೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *