“ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ.”
1 min read
ಬೆಳ್ತಂಗಡಿ ತಾಲ್ಲೂಕಿನ ಈ ಬಾರಿಯ ವಿಧಾನ ಸಭಾ ಚುನಾವಣೆ ಸೋಲು ಗೆಲುವಿನ ವಿಮರ್ಶೆಗಾಗಿ ಸೇರಿದ್ದ ವೀಕ್ಷರ ಮುಂದೆಯೇ ರಕ್ಷಿತ್ ಶಿವರಾಂ ಸೋಲಿಗೆ ಬ್ಲಾಕ್ ಕಾಂಗ್ರೆಸ್ ನೇರ ಕಾರಣ ಎಂದು ಆತ್ಮೀಯ ಬಳಗವೊಂದು ಸಭೆಯಲ್ಲಿ ಗಲಭೆ ಎಬ್ಬಿಸಿದ ಘಟನೆ ಜು.14 ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ಮೂರು ಮಾರ್ಗದ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ದಿನಾಂಕ 14/07/2023ರ ಶುಕ್ರವಾರದಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಇಬ್ರಾಹಿಂ ಸಹಿತ ಅಶ್ವಿನ್ ರೈ ಬಂಟ್ವಾಳ್ ವೀಕ್ಷಕರಾಗಿ ಸೇರಿದ್ದರು.
ಸಭೆ ಆರಂಭವಾಗುತ್ತಲೆ ರಕ್ಷಿತ್ ಶಿವರಾಂ ಆಪ್ತ ಬಳಗದ ರಾಜೇಶ್ ಭಟ್ ಸವಣಾಲು ಮತ್ತು ಪ್ರವೀಣ್ ಫೆರ್ನಾಂಡೀಸ್, ಸಚಿನ್ ನೂಜೋಡಿ ಸಹಿತ ಇತರರು ಅಶಿಸ್ತಿನಿಂದ ವರ್ತಿಸಿದ ಘಟನೆ ನಡೆಯಿತು.

ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ವೇಳೆ ವೀಕ್ಷಕರಾಗಿ ಬಂದಿದ್ದ ಇಬ್ರಾಹಿಂ ಜತೆಗಿದ್ದರು. ಸೋಲಿಗೆ ಕಾರಣರಾದವರನ್ನು ವೀಕ್ಷಕರಾಗಿ ಹೇಗೆ ಕರಿಸಿದ್ದೀರಿ ಎಂದು ಸಭೆಯಲ್ಲಿ ಪ್ರಶ್ನಿಸಿದರಲ್ಲದೆ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಪುತ್ರ ಅಭಿನಂದನ್ ಹರೀಶ್ ಅವರನ್ನು ಏಕವಚನದಿಂದ ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ಗಲಾಟೆವರೆಗೆ ತಲುಪಿದ ಘಟನೆ ನಡೆಯಿತು.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.