“ನೂತನ ಕಚೇರಿ ಉದ್ಘಾಟನೆ.”
1 min read
ದಿನಾಂಕ 15/07/2023 ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಕೆ. ಗಂಗಾಧರ ಗೌಡರ ನೂತನ ಕಚೇರಿ ಉದ್ಘಾಟನೆಯು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ *ಶ್ರೀ ಕೆ. ವಸಂತ ಬಂಗೇರವರ ನೇತೃತ್ವದಲ್ಲಿ ಸಾಯಿ ಪ್ರಸನ್ನ ಟವರ್ಸ್ ಬೆಳ್ತಂಗಡಿಯಲ್ಲಿ ನಡೆಯಿತು.

ಇದರ ಉದ್ಘಾಟನಾ ಸಮಾರಂಭವು ಬೆಳ್ತಂಗಡಿಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೇರಿಮಾರ್ ಬಾಲಕೃಷ್ಣ ಗೌಡರು ನೆರೆದಿರುವ ಎಲ್ಲರನ್ನು ಸ್ವಾಗತಿಸಿದರು.

ಈ ಸಮಾರಂಭಕ್ಕೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್ ರವರು ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೆ ಶೈಲೇಶ್ ಕುಮಾರ್ ಮತ್ತು ರಂಜನ್ ಜಿ ಗೌಡ, ಹಿರಿಯ ಕಾಂಗ್ರೆಸ್ಸಿಗರಾದ ಶ್ರೀಧರ್ ಬೀಡೆ, ರಾಜಶೇಖರ ಅಜ್ರಿ, ಕೆಪಿಸಿಸಿಯ ಸದಸ್ಯರಾದ ಮೋಹನ್ ಶೆಟ್ಟಿಗಾರ್ ಮತ್ತು ಕೇಶವ ಗೌಡ ಬೆಳಾಲು, ಕೆಪಿಸಿಸಿಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬಿ ಎಮ್ ಹಮೀದ್ ಉಜಿರೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಎಸಿ ಮ್ಯಾಥ್ಯು, ಮಹಿಳಾ ಕಾಂಗ್ರೆಸ್ ಘಟಕದ ಶ್ರೀಮತಿ ಜಸಿಂತಾ ಮೋನಿಸ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್, ಎಸ್ ಸಿ ಘಟಕದ ಮುಂಚೂಣಿ ನಾಯಕರಾದ ಬಿ.ಕೆ ವಸಂತ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಕಾಂಗ್ರೆಸ್ಸಿನ ಹಿರಿಯ ನಾಯಕರು ಮತ್ತು ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುಂದರ್ ಗೌಡ, ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಬಿ ಎ ನಝೀರ್, ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಶರತ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಗುರುವಾಯನಕೆರೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮುಕುಂದ ಸುವರ್ಣ, ಬೆಳ್ತಂಗಡಿ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಮೆಹಬೂಬ್ ಬೆಳ್ತಂಗಡಿ, ಸೇವಾದಳದ ಅಧ್ಯಕ್ಷರಾದ ಅಬ್ದುಸ್ಸಮದ್ ಕುಂಡಡ್ಕ, ನಾರಾವಿ ಜಿಲ್ಲಾ ಪಂಚಾಯತ್ ನ ಉಸ್ತುವಾರಿ ಮತ್ತು ಸಂಯೋಜಕರಾದ ರವೀಂದ್ರ ಬಾಂದೊಟ್ಟು, ಅಳದಂಗಡಿ ಜಿಲ್ಲಾ ಪಂಚಾಯತ್ ಉಸ್ತುವಾರಿಯಾದ ಪ್ರಶಾಂತ ವೇಗಸ್, ನೆರಿಯ ಗ್ರಾಮದ ಮಾಜಿ ಅಧ್ಯಕ್ಷರಾದ ಮೂಸ ಕುಂಞಿ ಮುಹಮ್ಮದ್ ಮತ್ತು ಸೆಬಾಸ್ಟಿನ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಖಾಲಿದ್ ಕಕ್ಯಾನ, ನಿತ್ಯಾನಂದ ಮಡಂತ್ಯಾರು, ಹಿರಿಯ ಕಾಂಗ್ರೆಸ್ಸಿಗರಾದ ಮಂಜುನಾಥ್ ಕಾಮತ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ಕೊನೆಗೆ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷರಾದ ಬಿ ಅಶ್ರಫ್ ನೆರಿಯರವರು ನೆರೆದಿರುವ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.