“ಪ್ರವಾಸಿಗರ ಹುಚ್ಚಾಟಕ್ಕೆ ಬ್ರೇಕ್: ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.ರೋಗಿಯನ್ನು ಹೊತ್ತ ಆಂಬುಲೆನ್ಸ್ ಕೂಡ ರಸ್ತೆಯಲ್ಲಿ ನಿಲ್ಲುವಂತಹ ಪರಿಸ್ಥಿತಿ ಈ ಜಲಪಾತದ ಬಳಿ ನಡೆದಿತ್ತು.
ಜಲಪಾತ ನೋಡಲು ಹೋಗಿ ಬಂಡೆಯಿಂದ ಬಿದ್ದು ಕೈಕಾಲು ಮುರಿದುಕೊಂಡವರು ಪ್ರಾಣ ಕಳೆದು ಕೊಂಡವರು ಕೂಡ ಇದ್ದಾರೆ. ಆದ್ರೆ ಇದೀಗ ಇವೆಲ್ಲದಕ್ಕೂ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ.ಮೂಡಿಗೆರೆಯ ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಳೆ ಬಿಟ್ಟ ತಕ್ಷಣವೇ ಈ ಭಾಗದಲ್ಲಿ ಪೊಲೀಸರು ಪ್ರತ್ಯಕ್ಷವಾಗಿದ್ದಾರೆ.ಈ ಭಾಗದಲ್ಲಿ ಪ್ರವಾಸಿಗರ ಹುಚ್ಚಾಟದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಇದೀಗ ಹೈವೆ ಪ್ಯಾಟ್ರೋಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಭಾಗದಲ್ಲಿ ಇಡೀ ದಿನ ಪೊಲೀಸರು ಮೊಕ್ಕಾಂ ಹೂಡಲಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.