“ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು.”
1 min read
ಉಡುಪಿ ಜಿಲ್ಲೆಯ,ಹೆಬ್ರಿ ತಾಲ್ಲೂಕಿನ,ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೃತಿಕಾ(3) ಮೃತ ಬಾಲಕಿ.
ಮಂಗಳವಾರ ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.