“ಮೃತದೇಹ ಪತ್ತೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಹ್ಯಾಂಡ್ ಪೋಸ್ಟ್ ನ ರಿಯಾಝ್ ತೋಟದಲ್ಲಿ ಸುಮಾರು 4ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕರನ್ನು ಹಾಸನ ಜಿಲ್ಲೆಯ,ಬಸರಿಕಟ್ಟೆ ಮೂಲದ ತನ್ಮಯಿ(19ವರ್ಷ), ಕಿಶೋರ್(12ವರ್ಷ) ಎಂದು ಗುರುತಿಸಲಾಗಿದೆ.

ಸಂದೀಪ್,ದಿವಾಕರ್, ಕಿಶೋರ್ , ತನ್ಮಯಿ ಇವರುಗಳು ಕೆಲಸ ಮಾಡುತ್ತಿದ್ದ ತೋಟದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಿಗೆರೆ ಠಾಣಾಧಿಕಾರಿ ಆದರ್ಶ್ ಹಾಗೂ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಸ್ಥಳ ಪರಿಶೀಲಿಸಿದ್ದಾರೆ.
ಕೆರೆಯಲ್ಲಿದ್ದ ಶವಗಳನ್ನು ಮೂಡಿಗೆರೆ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆಯ ಅಧ್ಯಕ್ಷರಾದ ಫಿಶ್ ಮೋನು, ಗೌರವಾಧ್ಯಕ್ಷರಾದ ಅಬ್ದುಲ್ ರೆಹಮಾನ್,ಉಪಾಧ್ಯಕ್ಷರಾದ ಆರಿಫ್ ಬಣಕಲ್ ಮತ್ತು ಕಾರ್ಯದರ್ಶಿ ಆಶಿಕ್ ಬೀಜುವಳ್ಳಿ ಇವರುಗಳ ಸಹಕಾರದಲ್ಲಿ ಮೆಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.