लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನಿರ್ಮಾಣ ಹಂತದ ಕಟ್ಟಡದ ಸಮೀಪ ನಿರ್ಮಿಸಿದ್ದ ನೀರಿನ ತೊಟ್ಟಿಗೆ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ದುರ್ಘಟನೆ ಮೂಡಿಗೆರೆ ತಾಲ್ಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.

ಜನ್ನಾಪುರ ಗ್ರಾಮದ ಸುನಿಲ್ ಡಿಕುನ್ನಾ ಮತ್ತು ರಿನಿಟಾ ಎಂಬುವವರ ಪುತ್ರ ಆಶಿರ್ (9ವರ್ಷ) ನೀರಿನ ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟ ಬಾಲಕ.

ಚಿನ್ನಿಗ ಪ್ರೌಢಶಾಲೆ ಆವರಣದಲ್ಲಿ ನೂತನವಾಗಿ ಮೊರಾರ್ಜಿ ವಸತಿ ಶಾಲೆಯ ಕಟ್ಟಡದ ನಿರ್ಮಾಣಕ್ಕೆ ನೀರಿನ ವ್ಯವಸ್ಥೆಗೆಂದು ತಾತ್ಕಾಲಿಕವಾಗಿ ಟಾರ್ಪಲ್ ಹಾಕಿ ನೀರಿನ ಹೊಂಡ ನಿರ್ಮಿಸಲಾಗಿತ್ತು. ನಿನ್ನೆ ಸಂಜೆ ಆಶಿರ್ ತನ್ನ ಸ್ನೇಹಿತರೊಂದಿಗೆ ಶಾಲಾ ಅವರಣದಲ್ಲಿ ಆಟವಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ಮೃತ ಆಶೀರ್ ಮೂಡಿಗೆರೆ ಬೆಥನಿ ಶಾಲೆಯಲ್ಲಿ ಮೂರನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ನಿನ್ನೆ ಶಾಲೆ ಬಿಟ್ಟ ಮೇಲೆ ಮನೆಗೆ ತೆರಳಿ ನಂತರ ಸಂಜೆ ತನ್ನ ಸ್ನೇಹಿತರೊಂದಿಗೆ ಚಿನ್ನಿಗ ಪ್ರೌಢಶಾಲಾ ಕ್ರೀಡಾಂಗದಲ್ಲಿ ಆಟವಾಡಲು ತೆರಳಿದ್ದ. ಈ ಸಂದರ್ಭದಲ್ಲಿ ನೀರಿನ ತೊಟ್ಟಿಯ ಬಳಿ ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೇಲೇಳಲಾಗದೇ ಮೃತಪಟ್ಟಿದ್ದಾನೆ.

ಮಗನನ್ನು ಕಳೆದುಕೊಂಡ ಹೆತ್ತವರ ಮತ್ತು ಕುಟುಂಬದವರ ರೋಧನ ಮುಗಿಲು ಮುಟ್ಟಿದೆ.

ವಿದ್ಯಾರ್ಥಿಗಳು ಹೆಚ್ಚಾಗಿ ಓಡಾಡುವ ಸ್ಥಳದಲ್ಲಿ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸದೇ ನೀರಿನ ತೊಟ್ಟಿಯನ್ನು ನಿರ್ಮಾಣ ಮಾಡಿದ್ದ ಕಟ್ಟಡ ಗುತ್ತಿಗೆದಾರರ ಮೇಲೆ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *