“ಟೈಲರ್ ಸಂಘದಿಂದ ಆರ್ಥಿಕ ನೆರವು.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪಟ್ಟಣದ ಟೈಲರಿಂಗ್ ಕೆಲಸ ಮಾಡುತ್ತಿದ್ದ ವಲೇರಿಯನ್ ಕ್ರಾಸ್ತ ಎಂಬುವರು ಇತ್ತೀಚೆಗೆ ಅಪಘಾತವೊಂದರಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು, ಇದರಿಂದ ಅವರಿಗೆ ಜೀವನ ಸಾಗಿಸಲು ಸಂಕಷ್ಟ ಎದುರಾಗಿದ್ದ ಹಿನ್ನೆಲೆಯಲ್ಲಿ ತಾಲ್ಲೂಕು ಟೈಲರ್ಸ್ ಕ್ಷೇತ್ರ ಸಮಿತಿ ವೃತ್ತಿ ಬಾಂಧವರ ಸಹಕಾರದಲ್ಲಿ ಕಿರು ಆರ್ಥಿಕ ಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಎಂ.ಶಿವೇಗೌಡ, ಉಪಾಧ್ಯಕ್ಷ ಎಂ.ಕೆ.ಷಣ್ಮುಖಾನಂದ, ಎಂ.ಎನ್.ಗಿರೀಶ್, ಎಚ್.ಡಿ.ಉದಯ, ಎಸ್.ಜೆ.ಲೋಲಾಕ್ಷಿ ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.