लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಬಾಳೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ : ಬೆಚ್ಚಿ ಬಿದ್ದ ಸಾರ್ವಜನಿಕರು.”

1 min read

ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ನಡೆದ ಮಾತುಕತೆ ವಿಕೋಪಕ್ಕೆ ತಿರುಗಿ ವ್ಯಕ್ತಿಯೋರ್ವನ ಬರ್ಬರ ಹತ್ಯೆಯಲ್ಲಿ ಕೊನೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ‌ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದ ಬಾಳೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.

ಮಧುಗುಂಡಿ ಗ್ರಾಮದ ವಾಸಿ ಸಂತೋಷ್ ಎಂಬಾತ ರಾತ್ರಿ ಕುಡಿದ ಮತ್ತಿನಲ್ಲಿ ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ಮಾತುಕತೆಗೆ ಬಂದಿದ್ದ ಕಾರ್ತಿಕ್ ನನ್ನು ಮನೆ ಒಳಗಡೆ ಮಚ್ಚಿನಿಂದ ಹಲ್ಲೆ ಮಾಡಿದ್ದು ಕಾರ್ತಿಕ್ ಎಂಬಾತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

ಹಲ್ಲೆ ಮಾಡುವ ಸಮಯದಲ್ಲಿ ಬಿಡಿಸಲು ಬಂದ ಸಂತೋಷ್ ನ ತಂದೆ ಭಾಸ್ಕರ ಗೌಡ (70 ವರ್ಷ) ಮತ್ತು ತಾಯಿ ಪ್ರೇಮ (52 ವರ್ಷ) ರವರಿಗೂ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ.ಕೃತ್ಯದ ಬಳಿಕ ಆರೋಪಿ ಸಂತೋಷ್ ಬಾಳೂರು ಪೊಲೀಸ್ ಠಾಣೆಗೆ ತಾನಾಗಿಯೇ ಬಂದು ಶರಣಾಗಿದ್ದಾನೆ.

ಮೃತ ಕಾರ್ತಿಕ್ ಈತನು ಭಾಸ್ಕರ ಗೌಡ ರವರ ಜಮೀನನ್ನು ಬೆಂಗಳೂರು ಮೂಲದ ಉದ್ಯಮಿಗೆ ಮಾರಾಟ ಮಾಡಲು ವ್ಯಾಪಾರ ಮಾಡಿ ಕೊಟ್ಟಿದ್ದು ಅದರ ಮುಂಗಡ ಬಾಬ್ತು 12 ಲಕ್ಷ ಹಣ ಕೊಡಿಸಿದ್ದು, ಆ ಹಣವನ್ನು ಭಾಸ್ಕರ್ ಗೌಡ ರವರ ಮೊದಲ ಮಗ ಶಿವು ಕುಮಾರ್ ರವರು ತೆಗೆದುಕೊಂಡು ಹೋಗಿದ್ದು ಈ ವಿಚಾರದಲ್ಲಿ ಮನಸ್ತಾಪ ಗೊಂಡು ಕಾರ್ತಿಕ್ ನನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನಿನ್ನೆ ರಾತ್ರಿ ತನ್ನ ಮನೆಗೆ ಬಂದಿದ್ದ ಕಾರ್ತಿಕ್ ಗೌಡ ಅವರೊಂದಿಗೆ ಹಣಕಾಸಿನ ವಿಚಾರವಾಗಿ ಮಾತಿಗೆ ಮಾತು ಬೆಳೆಸಿದ ಸಂತೋಷ್ ಏಕಾಏಕಿ ಮನೆಯೊಳಗಿನಿಂದ ಮಚ್ಚು ತಂದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಕಾರ್ತಿಕ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ.

ಕಾರ್ತಿಕ್ ಮಧುಗುಂಡಿ ಗ್ರಾಮದ ಉಪೇಂದ್ರಗೌಡ ಎಂಬುವವರ ಪುತ್ರ. ಈ ಭಾಗದಲ್ಲಿ ಉತ್ತಮ ಜನಸಂಪರ್ಕ ಹೊಂದಿದ್ದರು. ವಿವಾಹವಾಗಿ ಒಂದು ಮಗು ಇತ್ತು. ಅವರ ತಂದೆ ಇತ್ತೀಚೆಗಷ್ಟೇ ನಿಧನ ಹೊಂದಿದ್ದರು. ವಿವಾಹ ಮಾಡಿಕೊಟ್ಟಿದ್ದ ಸಹೋದರಿಯೂ ಈ ಹಿಂದೆ ಅಪಘಾತದಲ್ಲಿ ನಿಧನ ಹೊಂದಿದ್ದರು.
ಈ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *