“ಲೋಕವಳ್ಳಿ ಶಾಲೆಯಲ್ಲಿ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ ಆಚರಣೆ.”
1 min read
ದಿನಾಂಕ 15/08/2023ರ ಮಂಗಳವಾರದಂದು 76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲೋಕವಳ್ಳಿಯಲ್ಲಿ ಬೆಳಿಗ್ಗೆ 8:00ಗೆ ಸಕಲ ಸಿದ್ಧತೆಗಳೊಂದಿಗೆ ಧ್ವಜಾರೋಹಣ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕರಾದ ನವೀನ್.ಬಿ.ಆರ್ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು, ಶಾಲಾ ಸಿಬ್ಬಂದಿ ವರ್ಗ ಪೋಷಕರು ಎಸ್.ಡಿ.ಎಂಸಿ ಸದಸ್ಯರು. ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿ ನೆರವೇರಿಸಿದರು.


ಈ ಸಂದರ್ಭದಲ್ಲಿ ಹಳೆ ಮೂಡಿಗೆರೆ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಶ್ರೀ ಸಂದೀಪ್ ರವರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹಾಗೂ ಸ್ವಾತಂತ್ರ್ಯದ ಪ್ರಾಮುಖ್ಯತೆ ಕುರಿತು ಮಾತನಾಡಿದರು.ನಂತರ ವೇದಿಕೆಯ ಕಾರ್ಯಕ್ರಮವನ್ನು ಶಾಲಾವರಣದಲ್ಲಿರುವ ವಿಶಾಲವಾದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇದಿಕೆ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಮಹೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಳೆ ಮೂಡಿಗೆರೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಹಾಗೂ ಊರಿನ ಮುಖಂಡರಾದ ಲೋಕವಳ್ಳಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಮೂಡಿಗೆರೆ ಕಸಬಾ ಹೋಬಳಿ ಘಟಕದ ಅಧ್ಯಕ್ಷರಾದ ಎಂ.ಎಸ್ ನಾಗರಾಜ್, ಸಮಾಜಸೇವಕರು ಹಾಗೂ ಮೂಡಿಗೆರೆ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾದ ಶ್ರೀಯುತ ಹಸೈನಾರ್ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರಾದ ನವೀನ್.ಬಿ.ಆರ್ ರವರು ಮುಖ್ಯ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಂಡರು. ಸರ್ವರನ್ನು ಶಾಲಾ ಶಿಕ್ಷಕರಾದ ಶಿವಕುಮಾರ ಸ್ವಾಗತಿಸಿದರು. ಮುಖ್ಯ ಶಿಕ್ಷಕರಾದ ನವೀನ್ ರವರು ಸ್ವಾತಂತ್ರ್ಯ ದಿನಾಚರಣೆಯ ಪ್ರಾಮುಖ್ಯತೆ, ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಹಾಗೂ ಬಲಿದಾನವನ್ನು ಕುರಿತು ಪ್ರಾಸ್ತಾವಿಕವಾಗಿ ವಿವರವಾಗಿ ತಿಳಿಸಿದರು. 7ನೇ ತರಗತಿ ವಿದ್ಯಾರ್ಥಿನಿ ದೀಕ್ಷಿತ ಭಾಷಣ ಮಾಡಿದರು. ನಲಿ ಕಲಿ ಮಕ್ಕಳು ನೃತ್ಯ ಪ್ರದರ್ಶನ ನೀಡಿದರು. ನಂತರ ಏಳನೇ ತರಗತಿಯ ಶಿಲ್ಪ-ದೀಕ್ಷಿತ ತಂಡದವರಿಂದ ರಾಷ್ಟ್ರಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿದ್ದು ಮನಮೋಹಕವಾಗಿ ಮೂಡಿಬಂದಿತು. ಲೋಕವಳ್ಳಿ ರಮೇಶ್ ರವರು ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲೆಯ ಬಗ್ಗೆ ಶಿಕ್ಷಕರ ಬಗ್ಗೆ ಅಭಿಮಾನದ ನುಡಿಗಳನ್ನು ಈ ಸಂದರ್ಭದಲ್ಲಿ ಲೋಕವಳ್ಳಿ ಶಾಲೆ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆಯಾಗಿದ್ದು ಮುಖ್ಯ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಪ್ರಮುಖವಾಗಿದೆ ಎಂಬುದನ್ನು ಸ್ಮರಿಸಿದರು. ಮೂಡಿಗೆರೆ ಕಸಬಾ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷರಾದ ನಾಗರಾಜ್ ರವರು ಶಾಲೆಯಲ್ಲಿ ಸಾಂಸ್ಕೃತಿಕವಾಗಿ ಉತ್ತಮ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಮುಖ್ಯ ಶಿಕ್ಷಕರಾದ ನವೀನ್.ಬಿ.ಆರ್ ಹಾಗೂ ಶಿಕ್ಷಕರಾದ ಶಿವಕುಮಾರ್, ರೇಣುಕಾ, ಶಬಾನಾ ತಬಸುಮ್ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು ಮತ್ತು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಸಮಾಜ ಸೇವಕರಾದ ಸೈನಾರ್ ಸ್ವಾತಂತ್ರ್ಯ ದಿನಾಚರಣೆಗೆ ಶಾಲಾ ಮಕ್ಕಳಿಗೆ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಮಹೇಶ್. ಪಿ ಇವರು 76ನೇ ಸ್ವಾತಂತ್ರ್ಯ ದಿನಾಚರಣೆಯ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿದರು. ನಂತರ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ಹಳೆ ವಿದ್ಯಾರ್ಥಿಗಳು ಮತ್ತು ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಮತ್ತು ಗ್ರಾಮಸ್ಥರಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಆರನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅರ್ಮಾನ್ ಈ ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಉತ್ತಮವಾಗಿ ನಿರ್ವಹಿಸಿದ್ದು ಎಲ್ಲರೂ ಮೆಚ್ಚುಗೆಗೆ ಪಾತ್ರವಾಯಿತು. ನಂತರ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಿಹಿ ನೀಡಿ, ಭೋಜನ ವ್ಯವಸ್ಥೆ ಮಾಡಲಾಯಿತು. ಎಲ್ಲರೂ ಸಂಭ್ರಮ ಸಡಗರದಿಂದ ಭಾಗವಹಿಸಿ ಭೋಜನವನ್ನು ಸವಿದರು. ಈ 76ನೇ ಸ್ವಾತಂತ್ರ್ಯ ದಿನಾಚರಣೆಯ ಲೋಕವಳ್ಳಿ ಶಾಲೆಯ ಕಾರ್ಯಕ್ರಮ ಎಲ್ಲರಲ್ಲೂ ಸಂತೋಷಕ್ಕೆ ಕಾರಣವಾಯಿತು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.