“ಬಾರದ ಶಾಸಕರು.ದಲಿತರ ಕಡೆಗಣನೆ.”
1 min read
ದಿನಾಂಕ 18/08/2023ರ ಶುಕ್ರವಾರದಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಇದರ ವತಿಯಿಂದ ಕುವೆಂಪು ಕಲಾ ಮಂದಿರದಲ್ಲಿ
ಅಭಿನಂದನಾ ಸಮಾರಂಭ ನಡೆಯಿತು.

ಜಿಲ್ಲೆಯ ಐದು ಶಾಸಕರಲ್ಲಿ ಚಿಕ್ಕಮಗಳೂರು ಶಾಸಕರಾದ ತಮ್ಮಯ್ಯ ಮಾತ್ರ ಹಾಜರಿದ್ದರು.ದಲಿತರು ಸಂಘಟಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ.ಬಿ. ನಿಂಗಯ್ಯ ಅವರು ಪ್ರಾಸ್ತಾವಿಕ ನುಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್.ಡಿ.ತಮ್ಮಯ್ಯ,ಮಾಜಿ ಸಚಿವರಾದ ಶ್ರೀಮತಿ ಮೋಟಮ್ಮ ,ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಅಂಶುಮಂತ್,ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಮಲ್ಲೇಶ್ ಸ್ವಾಮಿ, ಹೆಚ್.ಹೆಚ್. ದೇವರಾಜ್,ಎ.ಎನ್.ಮಹೇಶ್ ಮತ್ತು ಪಕ್ಷದ ಹಿರಿಯ ಮುಖಂಡರು, ವಿವಿಧ ವಿಭಾಗ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇದ್ದರು.
ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮದಲ್ಲಿ ಇನ್ನುಳಿದ ನಾಲ್ಕು ಶಾಸಕರ ಗೈರು ಹಾಜರಿ ಬಹಳ ಬೇಸರ ತಂದಿದೆ ಜೊತೆಗೆ ದಲಿತರೆ ಸಂಘಟಿಸಿದ ಕಾರ್ಯಕ್ರಮದಲ್ಲಿ ದಲಿತರನ್ನೇ ಕಡೆಗಣಿಸಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.