लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪೋಷಕರ ದಿನ ನಿತ್ಯದ ತ್ಯಾಗದ ಪರವಾಗಿ ಮಕ್ಕಳ ಬದುಕು ರೂಪುಗೊಳ್ಳುತ್ತದೆ. ಪೋಷಕರ ತ್ಯಾಗಕ್ಕೆ ಪ್ರತಿಫಲವಾಗಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಉತ್ತಮ ಪ್ರಜೆಗಳಾಗಿ ನಮ್ಮ ಗುರಿ ತಲುಪಬೇಕೆಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಅವರು ದಿನಾಂಕ 18/08/2023ರ ಶುಕ್ರವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಆವರಣದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರದ ಪೋಷಣ್ ಯೋಜನೆಯಡಿ 9ಮತ್ತು 10ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಕ್ಕಳ ಆರೋಗ್ಯ ಹಾಗೂ ಬೆಳವಣಿಗೆ ದೃಷ್ಟಿಯಿಂದ ಬಿಸಿಯೂಟ ನೀಡುತ್ತಿದೆ. ಅದರ ಗುಣಮಟ್ಟವನ್ನು ಪರೀಕ್ಷಿಸಿ ವಿದ್ಯಾರ್ಥಿಗಳಿಗೆ ನೀಡಬೇಕು. ಸರಕಾರಿ ಶಾಲೆಯಲ್ಲಿಯೇ ವ್ಯಾಸಾಂಗ ಮಾಡಿರುವವರೇ ಹೆಚ್ಚಾಗಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆ ಎಂಬ ತಾತ್ಸಾರ ಬೇಡ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಎಂಬುವುದು ವಿದ್ಯಾರ್ಥಿ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. ಹಾಗಾಗಿ ಆತ್ಮ ವಿಶ್ವಾಸದಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿ ಪಠ್ಯದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಬೇಕು. ಸರ್ಕಾರ ನೀಡುವ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬಿಇಒ ಹೇಮಂತರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬಿಸಿಯೂಟದಲ್ಲಿ ಮೊಟ್ಟೆ,ಕಡ್ಲೆ ಚಿಕ್ಕಿ,ಬಾಳೆಹಣ್ಣು ನೀಡುವ ಯೋಜನೆಯು ನಿಜಕ್ಕೂ ಮೆಚ್ಚುವಂಥದ್ದು,ಇಂತಹ ಯೋಜನೆಯಿಂದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಫಲಿತಾಂಶಗಳನ್ನು ತರುವ ಮೂಲಕ ತಾಲ್ಲೂಕಿಗೆ ಹೆಸರು ಬರುವಂತೆ ಮಾಡಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಭಾಗ್ಯ, ಎಸ್‌ಡಿಎಂಸಿ ಉಪಾಧ್ಯಕ್ಷ ಸೋಮಶೇಖರ್, ಸದಸ್ಯ ಚಂದ್ರು, ಶಿಕ್ಷಕರಾದ ರುಕ್ಸಾನ, ಫ್ರೀಟಾ, ಜ್ಯೋತಿ ಮತ್ತಿತರರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *