AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಅಮೃತ ಮಹೋತ್ಸವ ಕಾರ್ಯಕ್ರಮ.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕು, ಬೆಟ್ಟಗೆರೆಯ ಹಳಿಕೆ ಸ.ಹಿ.ಪ್ರಾ.ಶಾಲೆಯಲ್ಲಿ “ತಾಲ್ಲೂಕು ಮಟ್ಟದ ಕ್ರೀಡಾಕೂಟ” ಮತ್ತು “ಅಮೃತ ಮಹೋತ್ಸವ” ಕಾರ್ಯಕ್ರಮವನ್ನು ಮಾಜಿ ಸಚಿವರು ಮತ್ತು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಬಿ.ಬಿ.ನಿಂಗಯ್ಯ ನವರು ಉದ್ಘಾಟಿಸಿ ಮಾತನಾಡಿದರು.

ಈ ಶುಭ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀಮತಿ ಮೋಟಮ್ಮ , ಡಾ.ಕೆಂಜಿಗೆ ಪ್ರದೀಪ್, ಡಿ.ಆರ್ ರಾಜು , ಬಿ.ಆರ್ ನಟರಾಜ್ , ಡಿ.ಡಿ.ಪಿ.ಐ , ಕೆ.ಬಿ ಗೋಪಾಲ್ ಗೌಡ, ಬಿ.ಇ.ಒ ಹೇಮಂತ್ ರಾಜ್ ರವರು, ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಸುರೇಂದ್ರ , ಮತ್ತು ಆಚರಣೆ ಸಮಿತಿಯ ಎಲ್ಲ ಸದ್ಯಸರುಗಳು, ಶಾಲಾ ಶಿಕ್ಷಕರು ವೇದಿಕೆಯಲ್ಲಿ ಹಾಜರಿದ್ದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆದ್ದಂತಹ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅತಿಥಿಗಳನ್ನು ಹಾಗೂ ದಾನಿಗಳನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರಿದಿದ್ದ ಎಲ್ಲರನ್ನೂ ಮೂಕವಿಸ್ಮಿತರನ್ನಾಗಿಸಿತು.

ತಾಲ್ಲೂಕಿನ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆದಿದ್ದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು,ಊರಿನ ಹಿರಿಯ ಮುಖಂಡರು,ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *