“ಗ್ರಾಮ ಸಭೆಗೆ ಅಧಿಕಾರಿಗಳ ಗೈರು ಹಾಜರಿ ಹಾಗೂ ಸೋಮವಾರಪೇಟೆ ತಾಲ್ಲೂಕನ್ನು ಸಂಪೂರ್ಣ ಬರ ಪ್ರದೇಶವಾಗಿ ಘೋಷಣೆ ಮಾಡದ ಸರ್ಕಾರ : ರೊಚ್ಚಿಗೆದ್ದ ಗ್ರಾಮಸ್ಥರು.”
1 min read
ಗ್ರಾಮ ಸಭೆಗೆ ಅಧಿಕಾರಿಗಳ ಗೈರು ಹಾಜರಿ ಹಾಗೂ ಸರ್ಕಾರ ಸೋಮವಾರಪೇಟೆ ತಾಲ್ಲೂಕನ್ನು ಸಂಪೂರ್ಣ ಬರ ಪ್ರದೇಶವಾಗಿ ಘೋಷಣೆ ಮಾಡುವವರೆಗೂ ಗ್ರಾಮ ಸಭೆಯನ್ನು ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡು ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸ್ಥರು ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ,ಸೋಮವಾರಪೇಟೆ ತಾಲ್ಲೂಕಿನ, ಗೌಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ 26/09/2023 ರಂದು ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ ಕುಮಾರ್ ಅಧ್ಯಕ್ಷತೆಯಲ್ಲಿ ಆರಂಭವಾಯಿತು ಆರಂಭವಾದ ಸ್ವಲ್ಪ ಸಮಯದದಲ್ಲೇ ಅಧಿಕಾರಿಗಳು ಗ್ರಾಮ ಸಭೆಗೆ ಗೈರು ಹಾಜರಾಗಿರುವ ಬಗ್ಗೆ ಗ್ರಾಮಸ್ಥರು ಪ್ರತಿರೋಧ ಹಾಗೂ ಧಿಕ್ಕಾರ ಕೂಗಿ ಅಧಿಕಾರಿಗಳ ಗೈರು ಹಾಜರಿಯ ಬಗ್ಗೆ ತರಾಟೆ ತೆಗೆದುಕೊಂಡು ಗ್ರಾಮ ಸಭೆ ಬಹಿಷ್ಕರಿಸಲು ತೀರ್ಮಾನಿಸಿದರು ಹಾಗೂ ಅದೇ ಸಮಯದಲ್ಲಿ ಕೊಡಗಿನ ಸೋಮವಾರಪೇಟೆ ತಾಲ್ಲೂಕನ್ನು ಸರ್ಕಾರ ಯಾಕೆ ಸಂಪೂರ್ಣ ಬರ ಪ್ರದೇಶವಾಗಿ ಘೋಷಣೆ ಮಾಡಿಲ್ಲ ಎಂದು ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಪ್ರಶ್ನೆ ಮಾಡಿದರು.
ಆದರೆ ಕೃಷಿ ಇಲಾಖೆಯ ಅಧಿಕಾರಿಗಳು ಗೈರು ಹಾಜರಿ ಕಂಡುಬಂದ ಹಿನ್ನೆಲೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ಗ್ರಾಮ ಸಭೆಯನ್ನು ಬಹಿಷ್ಕರಿಸಿದರು ಪ್ರತಿ ವರ್ಷದ ವಾಡಿಕೆಗಿಂತ ಕಡಿಮೆ ಮಳೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಿದ್ದಿದ್ದು ರೈತರು ಬೆಳೆದಿರುವ ಬೆಳೆಗಳು ಒಣಗುತ್ತಿದ್ದರು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಮ್ಮ ಸೋಮವಾರಪೇಟೆ ತಾಲ್ಲೂಕು ಬರ ಪ್ರದೇಶವಾಗಿ ಘೋಷಣೆ ಆಗಿಲ್ಲ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಗ್ರಾಮ ಸಭೆಯನ್ನು ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸ್ಥರೆಲ್ಲ ಒಟ್ಟಾಗಿ ಸೇರಿ ಈ ಗ್ರಾಮ ಸಭೆಯನ್ನು ಬಹಿಷ್ಕರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಭರತ್ ಕುಮಾರ್ ಹಾಗೂ ರೈತ ಮುಖಂಡರಾದ ಜಿ. ಎಂ ಹೂವಯ್ಯ,ಸುನಿಲ್ ಗೌಡಳ್ಳಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ, ಪ್ರಸಿ ಗೌಡಳ್ಳಿ,ಗುರು ಮತ್ತು ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸ್ಥರು ಹಾಜರಿದ್ದರು.
✍🏻ಬರಹ ಕೃಪೆ.✍🏻

ಫ್ರಾನ್ಸಿಸ್ ಡಿಸೋಜ.
ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ
ಕರ್ನಾಟಕ ರಕ್ಷಣಾ ವೇದಿಕೆ,ಕೊಡಗು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.