“ಅಭಿನಂದನೆಗಳು.”
1 min read
ಚಿಕ್ಕಮಗಳೂರು ಜಿಲ್ಲೆಯ,ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಹೋಬಳಿಯ ಯಲಗುಡಿಗೆ ಗ್ರಾಮದ ಶ್ರೀಮತಿ ಗಾಯತ್ರಿ ಮತ್ತು ಧರ್ಮೇಶ್ ಇವರ ಸುಪುತ್ರನಾದ ಶ್ರೀಯುತ ಪ್ರಮೋದ್ ಯೈ ಡಿ,ಇವರು ಮೈಸೂರಿನ ಬೃಂದಾವನ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ 17 ರ ವಯೋಮಿತಿ ಒಳಗಿನ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗವನ್ನ ಪ್ರತಿನಿಧಿಸಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ.

ಹಾಗೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ.
ಪ್ರಮೋದ್ ಗ್ರಾಮೀಣ ಪ್ರತಿಭೆಯಾಗಿದ್ದು, ಉತ್ತಮ ಆಟಗಾರನಾಗಿರುತ್ತಾನೆ, ಇವನು ಆಲ್ದೂರಿನ ಮಾನಸ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಗೆ ಮತ್ತು ನಮ್ಮ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ, ಹಾಗೆಯೇ ಇವರು ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಜ್ಯಕ್ಕೆ ಕೀರ್ತಿಯನ್ನು ತರಲಿ ಎಂದು ಇವರಿಗೆ ವಿಜೇಂದ್ರ ಸತ್ತಿಹಳ್ಳಿ (ಗಣಿತ ಶಿಕ್ಷಕರು) ಹಾಗೂ ಜಯಪಾಲ್ ಬಿ ಹೊಸಹಳ್ಳಿ (ದೈಹಿಕ ಶಿಕ್ಷಣ ಶಿಕ್ಷಕರು) ಎಲೀಟ್ ಮೈಂಡ್ಸ್ ಸ್ಕೂಲ್ ಚಿನ್ನಿಗ – ಜನ್ನಾಪುರ ) ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.