“ಕಾನೂನಿನ ಅರಿವು ಮಕ್ಕಳಿಗೆ ಅಗತ್ಯ : ಜಂಬುರಾಜ್ ಮಹಾಜನ್.”
1 min read
ದಿನಾಂಕ 23/09/2023ರ ಶನಿವಾರದಂದು ಶ್ರೀಮತಿ ನಿಂಗಮ್ಮ ಬೊಮ್ಮಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಬಣಕಲ್ ಪೋಲೀಸ್ ಠಾಣಾಧಿಕಾರಿಗಳಾದ ಜಂಬುರಾಜ್ ಮಹಾಜನ್ ಅವರು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು.

ಕಾನೂನಿನ ಮುಂದೆ ಎಲ್ಲರೂ ಒಂದೇ,ತಪ್ಪು ಯಾರೇ ಮಾಡಿದರೂ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ,ಯಾವುದೇ ರೀತಿಯ ಸಮಾಜ ಘಾತುಕ ಘಟನೆಗಳು ಅಥವಾ ದರೋಡೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಜೊತೆಗೆ ಯಾವುದೇ ತುರ್ತು ಸಂದರ್ಭದಲ್ಲಿ 112 (ERSS) ಕರೆ ಮಾಡಿ ತಿಳಿಸಬಹುದು ಎಂದರು.

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಮತ್ತು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಹೆಚ್ಚುತ್ತಿದೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗದಿರಿ,ನಿಮ್ಮೊಂದಿಗೆ ಯಾರಾದರೂ ಲೈಂಗಿಕ ದೌರ್ಜನ್ಯದ ರೀತಿಯ ಶೋಷಣೆ ಮುಂದಾದರೆ ತಕ್ಷಣ ಪೋಷಕರಿಗೆ ಹಾಗೂ ಸ್ಥಳೀಯ ಪೊಲೀಸರಿಗೆ ತಿಳಿಸುವಂತೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿ ಅಶೋಕ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಹೊನ್ನೇಶ್ ಬೆಟ್ಟಗೆರೆ, ಪ್ರಭಾರಿ ಮುಖ್ಯ ಶಿಕ್ಷಕರಾದ ಆಶಾಲತಾ,ಊರಿನ ಮುಖಂಡರಾದ ಬಿ.ಎಂ.ಅಣ್ಣಪ್ಪ,ಲೋಕೇಶ್ ಬೆಟ್ಟಗೆರೆ, ಲಕ್ಷ್ಮಣ,ಕೇಶವ್ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.