“ಮಾಹಿತಿ ಕಾರ್ಯಗಾರ.”
1 min read
ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ಮತ್ತು ಚಿಕ್ಕಮಗಳೂರು ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಒಂದು ದಿನದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಮುಖ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್.ಸಿಂಧ್ಯಾ ರವರು ವಹಿಸಿದ್ದರು.

ಶ್ರೀ ಜಿ.ರಂಗನಾಥ ಸ್ವಾಮಿ ಉಪ ನಿರ್ದೇಶಕರು ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಡಾ.ಬಿ.ಗೋಪಾಲಕೃಷ್ಣ ಭಾ.ಆ.ಸೇ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಇವರು ಉಪಸ್ಥಿತರಿದ್ದು ಸಭೆಯಲ್ಲಿ ಹಾಜರಿದ್ದ ಎಲ್ಲಾ ಶಿಕ್ಷಕರುಗಳಿಗೆ ಉತ್ತಮವಾದ ಮಾರ್ಗದರ್ಶನದಲ್ಲಿ ಮಕ್ಕಳಿಗೆ ತಿಳುವಳಿಕೆ ನೀಡುವಂತೆ ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ರಾಜ್ಯ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಎ.ಎನ್.ಮಹೇಶ್ ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತರಾದ ಶ್ರೀ ಎಮ್.ಎನ್. ಷಡಕ್ಷರಿ ಜಿಲ್ಲಾ ಆಯುಕ್ತರಾದ ಶ್ರೀಮತಿ ಮಮತಾ ತರಬೇತಿ ಆಯುಕ್ತರಾದ ಶ್ರೀಮತಿ ಸಂಧ್ಯಾರಾಣಿ ರಾಜ್ಯ ಸಂಸ್ಥೆಯ ಸಂಘಟನಾ ಆಯುಕ್ತರಾದ ಶ್ರೀ ಪ್ರಭಾಕರ್ ಭಟ್ ಹಾಗೂ ಕಡೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶರತ್ ಕೃಷ್ಣಮೂರ್ತಿ ತರೀಕೆರೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶಾಂಕ್ ಹಾಗೂ ಜಿಲ್ಲಾ ಸಂಸ್ಥೆಯ ಸ್ಥಾನಿಕ ಆಯುಕ್ತರಾದ ಸಿದ್ದೇಗೌಡ ಭಾರತಿ, ಜಿಲ್ಲಾ ಸಂಘಟನೆ ಆಯುಕ್ತರಾದ ಕಿರಣ್ ಕುಮಾರ್ ಜಿಲ್ಲಾ ಸಂಘಟಕರಾದ ನಿಹಾಲ್ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಆಗಮಿಸಿದಂತಹ 147 ಶಿಕ್ಷಕರುಗಳು ಈ ಕಾರ್ಯಕ್ರಮದ ಕೇಂದ್ರ ಬಿಂದುಗಳಾಗಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.