लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಶಿಲ್ಪ ಕಲೆಯ ಮೂಲಕ ದೇಶದ ಸಂಸ್ಕೃತಿ ಮತ್ತು ಪರಂಪರೆಯ ಪರಿಚಯ ಮಾಡಿಕೊಟ್ಟ ಜನಾಂಗ ವಿಶ್ವಕರ್ಮ ಜನಾಂಗ : ನಯನ ಮೋಟಮ್ಮ.” 

1 min read

ವಿಶ್ವಕರ್ಮ ಜನಾಂಗದಿಂದ ಶಿಲ್ಪ ಕಲೆಗಳ ಮೂಲಕ ಇಡೀ ಜಗತ್ತಿಗೆ ಈ ದೇಶದ ಪರಂಪರೆ ಬಗ್ಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಅಂತಹ ಕಲೆಯನ್ನು ಮುಂದಿನ ಪೀಳಿಗೆ ಮುಂದುವರೆಸಲು ವಿಶ್ವ ಕರ್ಮದ ಜನಾಂಗ ಶ್ರಮಿಸಬೇಕೆಂದು ಶಾಸಕಿ ನಯನ ಮೋಟಮ್ಮ ಹೇಳಿದರು.

ಅವರು ದಿನಾಂಕ 13/10/2023ರ ಶುಕ್ರವಾರದಂದು ಪಟ್ಟಣದ ತಾ.ಪಂ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜ ಸೇವಾ ಸಭಾ ವತಿಯಿಂದ ಏರ್ಪಡಿಸಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾನು ವಿದ್ಯಾರ್ಥಿ ದೆಸೆಯಲ್ಲಿ ವಿಶ್ವಕರ್ಮ ಜನಾಂಗದ ಮನೆಯಲ್ಲಿ ಬೆಳೆದಿದ್ದೇನೆ. ಅವರ ಆಚಾರ, ವಿಚಾರ, ಸಂಸ್ಕೃತಿ ತನ್ನ ಮೇಲೆ ಬಹಳಷ್ಟು ಪರಿಣಾಮ ಬೀರಿದ್ದರಿಂದ ಅವರ ವಿಚಾರವನ್ನು ಇಂದಿಗೂ ತನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ನಮ್ಮ ದೇಶದಲ್ಲಿ ವಿಶ್ವಕರ್ಮ ಜನಾಂಗದ ಸಂಖ್ಯೆ ಕಡಿಮೆ ಇದ್ದರೂ ಸಂಘಟಿತರಾಗಿ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಮುಂದೆ ಬರಬೇಕು. ತಾನು ಬಹುತೇಕ ಕಾರ್ಯಕ್ರಮಗಳಿಗೆ ಭೇಟಿ ನೀಡಿದ್ದಾಗ ಮಹಿಳೆಯರ ಸಂಖ್ಯೆ ಎಲ್ಲಿ ಅಧಿಕವಾಗುತ್ತಿತ್ತೋ ಆ ಸಮಾಜ ಪ್ರಗತಿ ಕಾಣುತ್ತಿದೆ ಎಂದರ್ಥ. ಅದೇ ರಿತಿಯಲ್ಲಿ ಇಲ್ಲಿಯೂ ಮಹಿಳೆಯರ ಸಂಖ್ಯೆ ಅಧಿಕವಾಗಿರುವುದು ಸಂತಸ ತಂದಿದೆ. ಸಾಮಾನ್ಯವಾಗಿ ಜನಪ್ರತಿನಿಧಿಗಳು ಜಾತಿ ಲೆಕ್ಕಾಚಾರದಲ್ಲಿ ರಾಜಕೀಯ ನಡೆಸುತ್ತಾರೆ. ಆದರೆ ತಾನು ಮೀಸಲು ಕ್ಷೇತ್ರದ ಶಾಸಕಿಯಾಗಿದ್ದರೂ ಹೊಸ ವಿಚಾರವನ್ನಿಟ್ಟುಕೊಂಟು ಎಲ್ಲಾ ಜನಾಂಗದ ಏಳಿಗೆಗೆ ಶ್ರಮಿಸುತ್ತೇನೆಂದು ಹೇಳಿದರು.

ನಿವೃತ್ತ ಉಪನ್ಯಾಸಕ ಶೃಂಗೇರಿಯ ಕೆ.ಆರ್.ಭಾಸ್ಕರ್ ಆಚಾರ್ಯ ಮಾತನಾಡಿ, ಎಲ್ಲಾ ಸಮುದಾಯದ ಜನರ ಜತೆ ಸಹ ಬಾಳ್ವೆಯಿಂದ ಸಾಗುವ ಮನೋಭಾವ ವಿಶ್ವಕರ್ಮ ಜನಾಂಗದವರಿಗಿದೆ. ದೇಶದ ಸಂಸ್ಕೃತಿ ಬಗ್ಗೆ ಚಿತ್ರಿಸುವ ಮಹಾನ್ ಕಾರ್ಯ ಮಾಡಿರುವ ವಿಶ್ವಕರ್ಮ ಸಮಾಜವು ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದೆ ಉಳಿದಿದೆ. ಹಾಗಾಗಿ ಸದಾ ಎಲ್ಲಾ ಸಮಾಜದ ಒಳಿತನ್ನು ಬಯಸುವ ವಿಶ್ವಕರ್ಮ ಜನಾಂಗ ಸಂಘಟಿತರಾಗಿ ರಾಜಕೀಯವಾಗಿ ಬೆಳೆದು ದೇಶ ಹಾಗೂ ಸಮಾಜ ಕಟ್ಟುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಕುಮಾರಿ ನಿತ್ಯ ಅವರು ಭರತನಾಟ್ಯ ನೃತ್ಯದ ಮೂಲಕ ಸಾರ್ವಜನಿಕರನ್ನು ರಂಜಿಸಿದರು.

 

ಮಾಜಿ ಸಚಿವೆ ಮೋಟಮ್ಮ, ವಿಶ್ವಕರ್ಮ ಸಮಾಜ ಸೇವಾ ಸಭಾದ ಜಿಲ್ಲಾಧ್ಯಕ್ಷ ಚೇತನ್‌ಕುಮಾರ್, ತಾಲ್ಲೂಕು ಅಧ್ಯಕ್ಷ ಎಚ್.ಪಿ.ಮಂಜುನಾಥ್ ಮಾತನಾಡಿದರು. ವಾಸು ಕಾರ್ಯಕ್ರಮವನ್ನು ನಿರೂಪಿಸಿದರು.ಆಶಾ ಜಯಕುಮಾರ್ ಮತ್ತು ಸಂಗಡಿಗರು ನಾಡಗೀತೆಯನ್ನು ಹಾಡಿದರು.

 

ಪ.ಪಂ. ಸದಸ್ಯರಾದ ಆಶಾ ಮೋಹನ್, ಎಚ್.ಪಿ.ರಮೇಶ್, ಕಮಲಾಕ್ಷಿ, ತಹಶೀಲ್ದಾರ್ ತಿಪ್ಪೇಸ್ವಾಮಿ, ವಿಶ್ವಕರ್ಮ ಸಮಾಜ ಸೇವಾ ಸಭಾದ ಮಹಿಳಾ ಮಂಡಳಿ ಅಧ್ಯಕ್ಷೆ ಚಂದ್ರಾವತಿ, ಗೌರವಾಧ್ಯಕ್ಷರಾದ ವಿಠಲ್ ಆಚಾರ್ಯ, ಮಂಜುನಾಥ್, ಪುಷ್ಪ, ಪುರೋಹಿತ ರತ್ನಾಕರ ಆಚಾರ್ಯ, ಗಣಪತಿ ಆಚಾರ್ಯ, ಅಣ್ಣೇಗೌಡ ಮತ್ತಿತರರಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *