“ಎಳನೀರು ವಾಹನ ಮತ್ತು ಗ್ಯಾಸ್ ಸಿಲಿಂಡರ್ ಲಾರಿಯ ನಡುವೆ ಅಪಘಾತ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಕೊಟ್ಟಿಗೆಹಾರದ ಚೆಕ್ ಪೋಸ್ಟ್ ಬಳಿ ದಿನಾಂಕ 16/10/2023ರ ಸೋಮವಾರ ಸಂಜೆ ಗ್ಯಾಸ್ ಸಿಲಿಂಡರ್ ಲಾರಿ-ಎಳನೀರು ಟೆಂಪೋಗಳ ನಡುವೆ ಅಪಘಾತ ಸಂಭವಿಸಿದೆ.
ಮಳೆಯ ಕಾರಣ ದಟ್ಟವಾದ ಮಂಜು ಕವಿದ ವಾತಾವರಣವಿತ್ತು ದಾರಿ ಕಾಣದೆ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಪರಸ್ಪರ ಡಿಕ್ಕಿ ಸಂಭವಿಸಿದ ರಭಸಕ್ಕೆ ಎಳನೀರು ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯಗಳಾಗಿದ್ದು ಸಾಮಾಜಿಕ ಕಾರ್ಯಕರ್ತ ಆರೀಫ್ ಅವರ ಅಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಲಾರಿಯ ಚಾಲಕನ ಕಾಲು ಲಾರಿಯ ಒಳಗೆ ಸಿಲುಕಿಕೊಂಡಿದ್ದು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದಿದ್ದಾರೆ.
ಟ್ರಾಫಿಕ್ ಜಾಮ್ .
ಅಪಘಾತದಿಂದಾಗಿ ಸುಮಾರು 5 ಕಿ.ಮೀ ವರೆಗೆ ಟ್ರಾಫಿಕ್ ಜಾಮ್ ಸಂಭವಿಸಿದೆ.
ಈ ಟ್ರಾಫಿಕ್ ಜಾಮ್ ನಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು,ಚಾಲಕರು ಪರದಾಡುವಂತಾಗಿದೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.