लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಬಿಜೆಪಿ ಪಕ್ಷದಿಂದ ಅಮಾನತು : ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮುರುಡಪ್ಪ.”

1 min read

ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿ ಜಿಲ್ಲಾದ್ಯಕ್ಷ ಎಚ್.ಸಿ. ಕಲ್ಮುರುಡಪ್ಪ ದಿನಾಂಕ 20/10/2023ರ ಶುಕ್ರವಾರದಂದು ಆದೇಶ ಹೊರಡಿಸಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಪಕ್ಷದ ತೀರ್ಮಾನಗಳನ್ನು ಪದೇ ಪದೇ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಪಕ್ಷದ ಘನತೆಗೆ ಕುಂದುಂಟು ಮಾಡಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಅಲ್ಲದೇ ಹಲವು ಬಾರಿ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಇದುವರೆಗೂ ಸಮಜಾಯಿಷಿ ನೀಡಿರುವುದಿಲ್ಲ. ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ನಿಮ್ಮನ್ನು (ವರಸಿದ್ದಿ ವೇಣುಗೋಪಾಲ್) ಅಮಾನತು ಮಾಡಲಾಗಿದೆ” ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ರಾಜೀನಾಮೆ ವಾಪಸ್ ಪಡೆದಿದ್ದ ವೇಣುಗೋಪಾಲ್:

ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಜಟಾಪಟಿ ನಡೆಯುತ್ತಿದ್ದು, ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವರಸಿದ್ದಿ ವೇಣುಗೋಪಾಲ್ ಇತ್ತೀಚೆಗೆ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದರು.

20 ವರ್ಷಗಳಿಂದ ಸಿ.ಟಿ.ರವಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಣುಗೊಪಾಲ್, ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದರು ರಾಜೀನಾಮೆ ನೀಡಿರಲಿಲ್ಲ. ಎರಡು ಬಾರಿ ರಾಜೀನಾಮೆ ನೀಡಿ ಅಂಗೀಕಾರವಾಗುವ ಮುನ್ನವೆ ಹಿಂಪಡೆದಿದ್ದರು. ಪಕ್ಷದ ಆಂತರಿಕ ತೀರ್ಮಾನವನ್ನ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಿನಾಂಕ 20/10/2023ರ ಶುಕ್ರವಾರದಂದು ಅಮಾನತು ಮಾಡಲಾಗಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *