लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕನ್ನಡ ಭಾಷೆ ಉಳಿವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು: ಹರೀಶ್.”

1 min read

ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಉಳಿವಿಗೆ ಕನ್ನಡಿಗರಾದ ನಾವು ಶ್ರಮಿಸಬೇಕು. ಮಕ್ಕಳಲ್ಲಿ ಕನ್ನಡದ ಕಂಪನ್ನು ತಿಳಿಸುವುದು ಕೂಡ ಶಿಕ್ಷಣ ಸಂಸ್ಥೆಯ ಕರ್ತವ್ಯವಾಗಿದೆ ಎಂದು ಎಂ.ಇ.ಎಸ್ ಶಾಲೆ ಕಾರ್ಯದರ್ಶಿ ಹರೀಶ್ ಹೇಳಿದರು.

ಅವರು ದಿನಾಂಕ 04/11/2023ರ ಶನಿವಾರದಂದು ಪಟ್ಟಣದ ಎಂ.ಇ.ಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆ ಏಕೀಕರಣಕ್ಕಾಗಿ ಶ್ರಮಿಸಿದ ಸಾಹಿತಿಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾರಾಜರು,ಸೈನಿಕರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸಣ್ಣ ಮಕ್ಕಳಿಗೆ ಮಹಾ ಪುರಷರ ವೇಷ ಧರಿಸಿಕೊಂಡು ಬರಲು ಸೂಚಿಸಲಾಗಿತ್ತು. ಅದರಂತೆ ಮಕ್ಕಳು ಉತ್ಸುಕರಾಗಿ ವೇಷ ಧರಿಸಿಕೊಂಡು ಬಂದಿದ್ದಾರೆ. ಅಲ್ಲದೇ ಇಂದಿನ ತಾಂತ್ರಿಕ ಯುಗದಲ್ಲಿ ಆಂಗ್ಲ ಭಾಷೆ ಅಗತ್ಯವಿದ್ದರೂ ಕನ್ನಡ ಭಾಷೆಗೆ ಮೊದಲ ಆಧ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ಕಣಚೂರು ಮಾತನಾಡಿ, ಇಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು. ಹಾಗಾಗಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಮತ್ತು ದೇಶದ ಮೇಲೆ ಅಭಿಮಾನ ಮೂಡಿಸಿಕೊಳ್ಳುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು,ಶಿಕ್ಷಕ ಶಿಕ್ಷಕಿಯರು,ಭೋದಕೇತರ ಸಿಬ್ಬಂದಿಗಳು,ಮಕ್ಕಳ ಪೋಷಕರು ಉಪಸ್ಥಿತರಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *