“ಗ್ಯಾಸ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಮೃತ್ಯು,ಮಹಿಳೆಗೆ ಗಂಭೀರ ಗಾಯ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಿದರಹಳ್ಳಿ ಬಸ್ ಡಿಪೋ ಸಮೀಪ ಗ್ಯಾಸ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕಿನಲ್ಲಿದ್ದ ಸವಾರ ಸಾವನ್ನಪ್ಪಿದ್ದಾರೆ.
ಬೈಕ್ ಚಲಾಯಿಸುತ್ತಿದ್ದ ವಿಶ್ವೇಂದ್ರ ಮೃತ ದುರ್ದೈವಿ,ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆ ಲಕ್ಷ್ಮೀ ಎಂಬುವವರಗೆ ಕಾಲು ಕಟ್ಟಾಗಿ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಬೈಕಿನಲಿದ್ದವರು ಜಯಪುರ ಮೂಲದ ಕಲ್ಕೆರೆ ಗ್ರಾಮದವರು ಎಂದು ತಿಳಿದುಬಂದಿದೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಹಾಗೂ ಗಾಯಾಳು ಮಹಿಳೆಯನ್ನು ಸಮಾಜ ಸೇವಕರಾದ ಆರೀಫ್ ಬಣಕಲ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.