“ಶೆಟಲ್ ಬ್ಯಾಡ್ಮಿಂಟನ್ : ರಾಜೇಶ್ ಬಿ.ಆರ್. ಗೆ ಪ್ರಥಮ ಸ್ಥಾನ.”
1 min read
ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಡೆದ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್ನ ರಾಜೇಶ್ ಬಿ ಆರ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸಿ.ಪಿ.ಸಿ ಪಾಲಿಟೆಕ್ನಿಕ್ ಮೈಸೂರು, ಇವರ ವತಿಯಿಂದ ನಡೆದ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್ನ ರಾಜೇಶ್ ಬಿ.ಆರ್. ಮತ್ತು ಉಡುಪಿಯ ದರ್ಶನ್.ಸಿ.ಅಂಬಲ್ಪಾಡಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಗಳೊಂದಿಗೆ ಪಾಲಿಟೆಕ್ನಿಕ್ ಉಡುಪಿ ಕಾಲೇಜಿನ ಪ್ರಾಂಶುಪಾಲರಾದ ಉಮಾ.ಬಿ.ಮತ್ತು ಕ್ರೀಡಾ ಯೋಜನಾಧಿಕಾರಿಗಳಾದ ಮಧು.ಎಂ.ಜಿ.ಇದ್ದರು. ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್ನ ರಾಜೇಶ್ .ಬಿ.ಆರ್, ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮೊ ವ್ಯಾಸಂಗ ಮಾಡುತ್ತಿದ್ದಾರೆ. ರಾಜೇಶ್ ಬಿ.ಆರ್ ಭಾರತಿಬೈಲ್ನ ರಾಮಚಂದ್ರ ಮತ್ತು ಸರೋಜ ದಂಪತಿಗಳ ಪುತ್ರ.
ಇದೇ ಕ್ರೀಡಾಕೂಟದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಕಾಲೇಜಿನ ವಿದ್ಯಾರ್ಥಿಗಳಾದ,ಸಾಕ್ಷಿತ್ ದೇವಾಡಿಗ ಕಾಪು ಉಡುಪಿ, ಸುಚಿತ್ ಕುಂದಾಪುರ, ಕಾರ್ತಿಕ್ ಶೆಟ್ಟಿಗಾರ್, ಸಂದೀಪ್.ಎಚ್.ಎಂ, ಶ್ರೀಜಿ ಆಚಾರ್ಯ ಕುಂದಾಪುರ, ಸನಾತ್ ಆಚಾರ್ಯ ಕಾಪು, ವಿನಯ್ ಕುಮಾರ್, ಆದಿತ್ಯ ಉಡುಪಿ ವಾಲಿಬಾಲ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.