“ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುವಂತೆ ಶಿಕ್ಷಕರು ಪ್ರೋತ್ಸಾಹಿಸಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ರಾಜ್.”
1 min read
ದಿನಾಂಕ 09/11/2023ರ ಗುರುವಾರದಂದು ಬಣಕಲ್ ಪ್ರೌಢಶಾಲೆಯಲ್ಲಿ ಮೂಡಿಗೆರೆ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಣಕಲ್ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಆತಿಕಾ ಬಾನು ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಣಕಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎ ಜಯರಾಮ್ ಗೌಡ ವಹಿಸಿದ್ದು ಅತಿಥಿಗಳಾಗಿ ದೈಹಿಕ ಶಿಕ್ಷಣ ಪರೀಕ್ಷಕರಾದ ಕೆ.ಬಿ.ಶ್ರೀನಿವಾಸ್,ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆಶ್ರಿತ್ ಗೌಡ ಹಾಗೂ ವಿದ್ಯಾ ಸಂಸ್ಥೆಯ ಖಜಾಂಚಿಗಳಾದ ಪೃಥ್ವಿ ಗೌಡ ನಿರ್ದೇಶಕರಾದ ವಿಕ್ರಂ.ಬಿ.ಎಸ್.ಹಾಗೂ ಮಹಮದ್ ಝಕಾವುಲ್ಲ ಗ್ರಾಮ ಪಂಚಾಯಿತಿಯ ಸದಸ್ಯರಾದ ಝರೀನ ಮತ್ತು ವಿನಯ್,ಶಿಕ್ಷಕರಾದ ವೇಣಿ ಹಾಗೂ ದಾನಿಗಳಾದ ದಿನೇಶ್ ಶೆಟ್ಟಿ ಮೈಸೂರು ಜಮೀರ್ ಪಾಷ ಮತ್ತು ಫ್ರೆಂಡ್ಸ್ ಕ್ಲಬ್ ಸದಸ್ಯರು ಮತ್ತು ಅಧ್ಯಕ್ಷರು ಹಾಗೂ ಇತರೆ ಅತಿಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೇಮಂತ್ ರಾಜ್ ಅವರು ಭಾಗವಹಿಸಿ ಮಾತನಾಡುತ್ತಾ,ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರತರುವುದಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಒಂದು ವೇದಿಕೆ,ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕವಾಗಿ ಜಗತ್ತು ಮುಂದುವರಿಯುತ್ತಿದೆ,ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವಂತೆ ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದರು.
ಐದು ವಲಯಗಳ 175 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಬಣಕಲ್ ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.