“ಉಚಿತ ಆಯುರ್ವೇದ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ.”
1 min read
ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ, ಬಣಕಲ್ ಪಟ್ಟಣದಲ್ಲಿರುವ ಸಾಯಿಕೃಷ್ಣ ಹೆಲ್ತ್ ಸೆಂಟರ್,ಬಿ.ವಿ.ಕೆ.ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್(ರಿ.) ಹಾಗೂ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಆಯುರ್ವೇದ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರವು ದಿನಾಂಕ 27/11/2023ರ ಸೋಮವಾರದಂದು ನಡೆಯಿತು.
ಈ ಸಂದರ್ಭದಲ್ಲಿ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆಶ್ರೀತ್ ಗೌಡ,ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ವಂದನಾ.ಎಂ.ಇರ್ವತ್ರಾಯ,ಯೆನಪೊಯ ಆಯುರ್ವೇದ ವೈದ್ಯಕೀಯ ಕಾಲೇಜು ಕೊಲ್ಲರಕೊಡಿ ನರಿಂಗಾನ ಮಂಗಳೂರಿನ ಪ್ರೊಫೆಸರ್ ಡಾ.ಅಜಂತಾ ಶಿವಾಜಿ ಕೊಟೆಕಾರ್ ಅವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರೊಜೆಕ್ಟ್ ಆಫೀಸರ್ ಶಿವಾನಂದ್ ಅವರನ್ನು ಸನ್ಮಾನಿಸಲಾಯಿತು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.