“ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಡಾನೆ ಸಾವು : ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಘಟನೆ.”.”
1 min read
ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಶನಿವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು.
ದಿನಾಂಕ 02/12/2023ರ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಕೆ ಚುಚ್ಚುಮದ್ದು ಹಾಕಲಾಗಿತ್ತು
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿಯೇ ಕಾಡಾನೆ ಬಿದ್ದಿರುವುದು ಕಂಡಿದೆ.
ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದಿಂದ ಸುಮಾರು 50 ಮೀಟರ್ ದೂರದಲ್ಲಿ ಕಾಡಾನೆ ಸತ್ತು ಬಿದ್ದಿತ್ತು.
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.
ಮೇಲ್ನೋಟಕ್ಕೆ ಆನೆ ಆಯಾತಪ್ಪಿ ಬಿದ್ದು ಮೇಲೇಳಲಾಗದೇ ಸಾವನ್ನಪ್ಪಿರುವಂತೆ ಕಂಡುಬಂದಿದೆ. ಆದರೆ ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಆನೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯು ಯಾವುದೇ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಇರುವುದು ಮತ್ತು ಪೂರಕವಾದ ತಂತ್ರಗಳನ್ನು ಬಳಸದಿರುವುದು ಕಾಡಾನೆಯ ಸಾವಿಗೆ ಕಾರಣವೆಂದು ಪ್ರಾಣಿ ದಯಾ ಸಂಘವು ಹೇಳುತ್ತಿದೆ. ಈ ರೀತಿಯ ಕಾರ್ಯಾಚರಣೆ ವೇಳೆ ಆನೆಯು ಅರವಳಿಕೆಯ ಮತ್ತಿನಲ್ಲಿರುವುದರಿಂದ ಯಾವುದೇ ವಿಧದ ಘಟನೆಗಳು ಸಂಭವಿಸಬಹುದೆಂಬ ಸಾಮಾನ್ಯ ಜ್ಞಾನ ಅರಣ್ಯ ಇಲಾಖೆ ಇಲ್ಲದಂತಾಗಿದೆ,ಮನುಷ್ಯರಂತೆ ಆನೆಯೂ ಒಂದು ಜೀವಿ ಅವುಗಳಿಗೂ ಜೀವವಿದೆ.ಮನುಷ್ಯ ಮಾಡಿದ ಪರಿಸರ ನಾಶ,ಮನುಷ್ಯನ ಆಸೆ,ಅತಿಯಾದ ಭೂಕಬಳಿಕೆ ಇದರಿಂದಾಗಿ ಪ್ರಾಣಿಗಳು ಕಾಡಿನಿಂದ ನಾಡಿನೆಡೆಗೆ ಮುಖಮಾಡಿದೆ,ಇದನ್ನು ಸಮರ್ಪಕವಾಗಿ ಸರಿಪಡಿಸಬೇಕಾಗಿರುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದು ಪ್ರಾಣಿ ದಯಾ ಸಂಘ ಹೇಳಿದೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.