लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಪ್ರತಿನಿಧಿಗಳ ಮೇಲೆ ಅವ್ಯಾಚ್ಚ ಶಬ್ದದಿಂದ ಅನಾಮಿಕ ವ್ಯಕ್ತಿಯಿಂದ ನಿಂದನೆ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ ಅಸುಪಾಸಿನ ವ್ಯಕ್ತಿಯೊಬ್ಬರು ಮನಸೋ ಇಚ್ಚೆ ಪತ್ರಿಕೆ ಮತ್ತು ವಾಹಿನಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈವಿಚಾರವಾಗಿ ಮೂಡಿಗೆರೆ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆ ಸೇರಿ ಚರ್ಚಿಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿದ್ದಾರೆ.

 

ಏನಿದು ಘಟನೆ.?

ಕಳೆದ ಮೂರು ದಿನಗಳ ಹಿಂದೆ ಮೇಕನಗದ್ದೆ ಸಮೀಪ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಅರಣ್ಯ ಇಲಾಖೆಯ ಅಚಾತುರ್ಯದಿಂದ ಸಾವನ್ನಪ್ಪಿದ್ದು,ಈ ಕುರಿತು ಅನೇಕ ಪತ್ರಿಕೆಗಳಲ್ಲಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು.ಆದರೆ ಅನಾಮಿಕ ವ್ಯಕ್ತಿಯೊಬ್ಬರು ಈ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳು ಕಾಡು ಪ್ರಾಣಿಗಳ ಪರವಾಗಿ ಹಾಗೂ ಕಾರ್ಯಾಚರಣೆಯ ಸಂದರ್ಭದಲ್ಲಿ ಆದಂತಹ ಘಟನೆಗಳ ವರದಿಯನ್ನು ಪ್ರಸಾರ ಮಾಡುತ್ತಿದೆ, ಇಲ್ಲಿ ಪ್ರಾಣಿಗಳ ಜೀವಕ್ಕೆ ಬೆಲೆ, ಮನುಷ್ಯ ಮತ್ತು ತಾನು ಬೆಳೆದ ಫಸಲಿನ ಬಗ್ಗೆ ಚಿಂತೆ ಇಲ್ಲ, ಸುದ್ದಿ ಮಾಡುವ ಪತ್ರಿಕೆಯವರಾಗಲಿ ದೃಶ್ಯ ಮಾಧ್ಯಮದವರಾಗಲಿ ಯಾರು ಕೂಡ ಜರ್ನಲಿಸಂ ಡಿಗ್ರಿಯನ್ನು ಪಡೆದಿಲ್ಲ ಎಂದು ಹೇಳಿದಲ್ಲದೇ ಬಾಯಿಗೆ ಬಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಅನಾಮಿಕ ವ್ಯಕ್ತಿಯು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳ ಪ್ರತಿನಿಧಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಧ್ವನಿ ಮುದ್ರಿಕೆ.

 

ಘಟನೆಗೆ ಸಂಬಂಧಿಸಿದಂತೆ ಕಿಡಿಕಾರಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರು.

ಇನ್ನೂ ಈ ಕುರಿತಾಗಿ ವಾಹಿನಿಯೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅದ್ಯಕ್ಷರಾದ ಕಣಚೂರು ಆನಂದ ಅವರು ಸಂವಿಧಾನದಲ್ಲಿರುವ ನಾಲ್ಕು ಅಂಗಗಳಲ್ಲಿ ಮುಖ್ಯವಾದ ಅಂಗವಿದ್ದರೆ ಅದು ಪತ್ರಿಕಾಂಗ ಅಂತಹ ಪತ್ರಿಕಾರಂಗದ ಪ್ರತಿನಿಧಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯನ್ನು ಬಂಧಿಸಿ ಇನ್ನೆರಡು ದಿನಗಳಲ್ಲಿ ನ್ಯಾಯ ಒದಗಿಸಿ ಕೊಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕಿಡಿಕಾರಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

 

About Author

Leave a Reply

Your email address will not be published. Required fields are marked *