“ಡಿ.08ಕ್ಕೆ ಡಿ.ಬಿ.ಸಿ.ನುಡಿ ನಮನ.”
1 min read
ಸಮಾನ ಮನಸ್ಕರ ವೇದಿಕೆ ವತಿಯಿಂದ ದಿನಾಂಕ 08/12/2023ರ ಶುಕ್ರವಾರದಂದು ಮಧ್ಯಾಹ್ನ 03 ಗಂಟೆಗೆ ಪಟ್ಟಣದ ಜೇಸಿ ಭವನದಲ್ಲಿ ಮಾಜಿ ಸಚಿವ, ಹಿರಿಯ ರಾಜಕಾರಣಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರನ್ನು ನೆನಪು ಮಾಡಿಕೊಳ್ಳುವ ಸಲುವಾಗಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾನ ಮನಸ್ಕರ ವೇದಿಕೆಯ ಮುಖಂಡ ಬಿ.ಕೆ.ಲಕ್ಷ್ಮಣ್ಕುಮಾರ್ ಹೇಳಿದರು.
ಅವರು ವಾಹಿನಿಯೊಂದಿಗೆ ಮಾತನಾಡಿ,ಹಿರಿಯ ರಾಜಕಾರಣಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರು ತಮ್ಮ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಡೆಸಿದ್ದಾರೆ. ಅವರ ಅವಧಿಯಲ್ಲಿ ರಾಜ್ಯ ಹಾಗೂ ದೇಶದ ಉತ್ತಮ ಕೊಡುಗೆ ನೀಡಿವ ಮೂಲಕ ಮಹಾನ್ ವ್ಯಕ್ತಿ ಎನಿಸಿಕೊಂಡಿದ್ದರು. ಅವರ ರಾಜಕೀಯ ಅನುಭವ, ಆದರ್ಶ ಜೀವನ ಎಲ್ಲಿರಿಗೂ ಮಾದರಿಯಾಗಬೇಕು. ಹಾಗಾಗಿ ಸಮಾನ ಮನಸ್ಕರ ವೇದಿಕೆಯಲ್ಲಿ ಎಲ್ಲಾ ಪಕ್ಷ ಹಾಗೂ ಸಂಘ ಸಂಸ್ಥೆ ಮುಖಂಡರು ಸೇರಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರನ್ನು ನೆನಪು ಮಾಡಿಕೊಳ್ಳುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ನುಡಿ ನಮನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ರವೀಂದ್ರ ರೇಶ್ಮೆ,ಲೇಖಕ ಲೆಂಪೆ ದೇವರಾಜು ಸೇರಿದಂತೆ ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ,ಮಾಜಿ ಕೇಂದ್ರ ಸಚಿವೆ ಡಿ.ಕೆ.ತಾರಾದೇವಿ,ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ದೇವವೃಂದ,ಅಮೇರಿಕಾದ ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷ ಡಾ.ವಿಶ್ವಮಿತ್ರ,ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಮಾನ ಮನಸ್ಕರ ವೇದಿಕೆಯ ಮುಖಂಡರಾದ ಡಿ.ಬಿ.ಜಯಪ್ರಕಾಶ್ ದಾರದಹಳ್ಳಿ,ಡಿ.ಬಿ.ಅಶೋಕ್ ದಾರದಹಳ್ಳಿ,ಬಿ.ಎಲ್.ದಿನೇಶ್ ಬೆಟ್ಟಗೆರೆ,ಗೃಹ ಮಂಡಳಿ ಮಾಜಿ ಅಧ್ಯಕ್ಷ ಜಿ.ಎಚ್.ಹಾಲಪ್ಪಗೌಡ, ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಜೆ.ಎಸ್.ರಘು, ಕೆಂಪೇಗೌಡ ಯುವ ಒಕ್ಕಲಿಗರ ವೇದಿಕೆಯ ಅಧ್ಯಕ್ಷ ಬ್ರಿಜೇಶ್ ಕಡಿದಾಳ್ ಉಪಸ್ಥಿತರಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.