ಕೋವಿಡ್ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ಇರಲಿ : ಜಿಲ್ಲಾಧಿಕಾರಿ ಮೀನಾ ನಾಗರಾಜ್.”
1 min read
ಕೋವಿಡ್ ಬಗ್ಗೆ ಜನರು ಆತಂಕಗೊಳ್ಳುವ ಅಗತ್ಯ ಇಲ್ಲದಿದ್ದರೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದ್ದಾರೆ.
ವಾಹಿನಿಯೊಂದಿಗೆ ಮಾತನಾಡಿದ ಅವರು ಜಿಲ್ಲೆಯು ಪ್ರವಾಸಿ ತಾಣ ಆಗಿರುವುದರಿಂದ ರಾಜ್ಯ /ಅಂತರ್ ರಾಜ್ಯ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.
ಜ್ವರ /ಕೆಮ್ಮು ಕಾಣಿಸಿಕೊಂಡಲ್ಲಿ ಪರೀಕ್ಷೆ ನಡೆಸಿಕೊಳ್ಳುವಂತೆ ಸೂಚಿಸಿರುವ ಅವರು ಜಿಲ್ಲಾ ಕೇಂದ್ರದಲ್ಲಿ ಈಗಾಗಲೇ ಪರೀಕ್ಷೆ ಆರಂಭಗೊಂಡಿದೆ ಎಂದು ಹೇಳಿದರು.
ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಲಾಗುತ್ತಿದ್ದು, ಜಿಲ್ಲೆಯಲ್ಲಿರುವ ಏಳೂ ಆಕ್ಸಿಜನ್ ಘಟಕಗಳನ್ನು ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.
ಒಟ್ಟು 14 ಆಂಬುಲೆನ್ಸ್ ಗಳು,692 ಹಾಸಿಗೆ,87 ವೆಂಟಿಲೇಟರ್ಸ್,907 ಜಂಬೊ ಆಕ್ಸಿಜನ್ ಸಿಲಿಂಡರ್, ಸ್ಯಾನಿಟೈಸರ್,ಪಿಪಿಇ ಕಿಟ್ ಸೇರಿದಂತೆ ಇತರೆ ವಸ್ತುಗಳನ್ನು ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.