“ರೈತ ದಿನಾಚರಣೆ.”
1 min read
ದಿನಾಂಕ 22/12/2023ರ ಶುಕ್ರವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಮಾಕೋನಹಳ್ಳಿಯಲ್ಲಿ ಮೂಡಿಗೆರೆ ಜೆಸಿಐ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ರೈತ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳಿಂದ ಕಾಳುಮೆಣಸಿನ ಬಗ್ಗೆ ತರಬೇತಿ ನೀಡಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ಎಂಟು ಜನ ಪ್ರಗತಿಪರ ರೈತರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಿಗೆರೆ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷರಾದ ಸುಪ್ರಿತ್ ವಹಿಸಿದ್ದರು.
ಕಾರ್ಯಕ್ರಮಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಸವಿತಾರವಿ,ಕಾರ್ಯದರ್ಶಿ ದೀಕ್ಷಿತ್ ಕಣಚೂರು,ಪೂರ್ವಾಧ್ಯಕ್ಷರಾದ ಶಶಿಕರಣ್,ರಾಜು,ಮಾಕೋನಹಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಅಶ್ವತ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.