“ಜನವರಿ 5ಕ್ಕೆ ಭೀಮಾ ಕೋರೆಗಾಂವ್ ವಿಜಯೋತ್ಸವ.”
1 min read
ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲಯನ್ಸ್ ವೃತ್ತದಲ್ಲಿ ಜನವರಿ 5ರಂದು ಸಂಜೆ 4 ಗಂಟೆಗೆ 206ನೇ ಭೀಮಾ ಕೋರೆಗಾವ್ ವಿಜಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಹೇಳಿದರು.
ಅವರು ದಿನಾಂಕ 29/12/2023ರ ಶುಕ್ರವಾರದಂದು ಪಟ್ಟಣದಲ್ಲಿ ವಾಹಿನಿಯೊಂದಿಗೆ ಮಾತನಾಡಿ,ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಹಾಗೆ ಇಂದಿನ ಸ್ಥಿತಿಗತಿಗಳಿಗೆ ಇತಿಹಾಸದ ಕುರುಹುಗಳಿವೆ.ಅದನ್ನು ಹುಡುಕಬೇಕು. ಕಳೆದುಕೊಂಡಿದ್ದನ್ನು ಪುನರ್ ನಿರ್ಮಾಣ ಮಾಡಲು ಇತಿಹಾಸದ ಅರಿವು ಬೇಕು.
205 ವರ್ಷದ ಹಿಂದೆ ನಮ್ಮ ಹಿರಿಯರ ತ್ಯಾಗ,ಬಲಿದಾನ,ಶೌರ್ಯದ ಇತಿಹಾಸವೇ ಭೀಮಾ ಕೋರೆಗಾಂವ್ ಯುದ್ಧ.ಈ ಬಗ್ಗೆ ಯುವ ಜನಾಂಗಕ್ಕೆ ಅರಿವು ಮೂಡಿಸುವ ಸಲುವಾಗಿ ಭೀಮಾ ಕೋರೆಗಾಂವ್ ವಿಜಯೋತ್ಸವ ಮೂಡಿಗೆರೆ ಪಟ್ಟಣದಲ್ಲಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು ಮಾತನಾಡಿ, ಕಾರ್ಯಕ್ರಮಕ್ಕೆ ಮೈಸೂರಿನ ನಿವೃತ್ತ ಪ್ರಾಧ್ಯಾಪಕ ಪ್ರೋ.ಮಹೇಶ್ಚಂದ್ರ ಗುರು,ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ,ಖ್ಯಾತ ವಾಗ್ಮಿ ಸುಧೀರ್ಕುಮಾರ್ ಮುರೊಳ್ಳಿ ಆಗಮಿಸಲಿದ್ದಾರೆ.ವಿದ್ಯಾರ್ಥಿಗಳು,ಮಹಿಳೆಯರು ಸೇರಿದಂತೆ ಎಲ್ಲಾ ಪ್ರಗತಿಪರ ಸಂಘಟನೆ ಮುಖಂಡರು, ಸಾರ್ವಜನಿಕರು ಸೇರಿದಂತೆ ಸುಮಾರು 5ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಾಗಾಗಿ ಸಮಾಜದ ಕಳಕಳಿ ಉಳ್ಳವರು ಅಧಿಕ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.
ಸಮಿತಿ ಪದಾಧಿಕಾರಿಗಳಾದ ಶ್ರೀಕಾಂತ್ ಹೊರಟ್ಟಿ,ಹರೀಶ್ ನವಿಲುಕೆರೆ,ಹೆಸಗಲ್ ಭಾನುಪ್ರಕಾಶ್,ಕಿರಣ್,ಬಿದರಹಳ್ಳಿ ಸುಧಾಕರ್,ಪ್ರದೀಪ್,ಗಣೇಶ್ ಮೂಡಿಗೆರೆ ಉಪಸ್ಥಿತರಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.