“ಕೆಂಡ ಹಾಯುವ ವೇಳೆ ಆಯಾ ತಪ್ಪಿದ ಅಯ್ಯಪ್ಪ ಮಾಲಾಧಾರಿ : ತೀವ್ರ ಗಾಯ.”
1 min read
ಮಲ್ಪೆ ಸಮೀಪದ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಕೆಂಡ ಸೇವೆ ನಡೆಯುತ್ತಿದ್ದಾಗ ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ರಾಶಿಗೆ ಬಿದ್ದು ತೀವ್ರವಾಗಿ ಗಾಯಗೊಂಡ ಘಟನೆ ದಿನಾಂಕ 03/01/2024ರ ಬುಧವಾರದಂದು ನಡೆದಿದೆ.
ಇದೀಗ ಗಾಯಾಳು ಅಯ್ಯಪ್ಪ ಮಾಲಾಧಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ಅಯ್ಯಪ್ಪ ಮಾಲಾಧಾರಿಗಳ ಕೆಂಡ ಸೇವೆ ನಡೆಯುತ್ತಿರುತ್ತದೆ.ಅದರಂತೆ ಕೆಂಡ ಹಾಯುವ ವೇಳೆ ಅಯ್ಯಪ್ಪ ಮಾಲಾಧಾರಿ ಆಯತಪ್ಪಿ ಕೆಂಡದ ರಾಶಿಗೆ ಬಿದ್ದಿದ್ದಾರೆ.ತಕ್ಷಣ ಇತರ ಮಾಲಾಧಾರಿಗಳು ಅವರ ಸಹಾಯಕ್ಕೆ ಬಂದಿದ್ದಾರೆ.
ಘಟನೆಯ ವಿಡಿಯೋ.
ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು,ಸದ್ಯ ಮಾಲಾಧಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
✍🏻ಬರಹ ಕೃಪೆ.✍🏻
ಸಿದ್ದಿಕ್ ಚಕ್ಕಮಕ್ಕಿ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.