“ಸಾಮಾಜಿಕ ಸಕ್ರೀಯ ಸೇವಾ ಸಂಸ್ಥೆಯ ವತಿಯಿಂದ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯಕ್ರಮ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಎಂ. ಜಿ.ಎಂ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸುಮಾರು 60 ಅಡಿ ಎತ್ತರದಲ್ಲಿರುವ ನೀರಿನ ಟ್ಯಾಂಕ್ ಮತ್ತು ಕೆಳಗಿರುವ ಸುಮಾರು 16ಅಡಿಯ ನೀರಿನ ಟ್ಯಾಂಕ್ ಸ್ವಚ್ಛತೆಯನ್ನು ಸಾಮಾಜಿಕ ಸಕ್ರೀಯ ಸೇವಾ ಸಂಸ್ಥೆಯ ಅಧ್ಯಕ್ಷರಾದ ಫಿಶ್ ಮೋಣು,ಗೌರವಾಧ್ಯಕ್ಷರಾದ ಅಬ್ದುಲ್ ರೆಹಮಾನ್,ಆಶಿಕ್ ರೆಹಮಾನ್,ಬಶೀರ್,ಅಶ್ರಫ್,ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಸೇರಿ ಮಾಡಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾದಿಕಾರಿಗಳಾದ D.R. ಪ್ರಿಯಾಂಕಾ ಉಪಸ್ಥಿತರಿದ್ದರು.
ತಾಲ್ಲೂಕು ಕೇಂದ್ರದಲ್ಲಿ ಇರುವ ಕಚೇರಿಗಳ ಸ್ವಚ್ಛತೆಗೆ ಅನುದಾನ ಇರುತ್ತದೆ,ಇದರ ಜೊತೆಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಸಾಮಾಜಿಕ ಕೆಲಸವನ್ನು ಮಾಡುವುದು ಉತ್ತಮ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.