“ಹೆತ್ತೂರಿಗೆ ಕೀರ್ತಿ ತಂದ ಹಂತೂರು ರವಿ.”
1 min read
ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರು ನೀಡುವ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿಗೆ ಜಾನಪದ ಕಲಾವಿದ ರವಿ ಹಂತೂರು ಭಾಜನರಾಗಿದ್ದಾರೆ.
ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವ ಸಂಘಗಳ ಒಕ್ಕೂಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಡಬ ತಾಲ್ಲೂಕು ಸವಣೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾ ಸಂಘ (ರಿ.) ಮೂಡಿಗೆರೆ ಜಾನಪದ ತಂಡದಲ್ಲಿ ಹಲವಾರು ವರ್ಷಗಳಿಂದ ಖಜಾಂಜಿಯಾಗಿ ಕಾರ್ಯನಿರ್ವಹಿಸುತ್ತಿರುವ ರವಿ.ಎಚ್.ಎಸ್ ಅವರು ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ,ಹಂತೂರು ಗ್ರಾಮದ ನಿವಾಸಿ.
ಇವರು ಹಲವಾರು ಬಾರಿ ಜಿಲ್ಲಾ ಮಟ್ಟ,ರಾಜ್ಯ ಮಟ್ಟ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಾಡಿರುತ್ತಾರೆ ಅದರ ಜೊತೆಯಲ್ಲೇ ಹತ್ತಾರು ಆಸಕ್ತ ವಿದ್ಯಾರ್ಥಿಗಳಿಗೆ,ಯುವಜನರಿಗೆ ಜಾನಪದದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡುವ ಮೂಲಕ ಗಾಯಕರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.
ಇವರು ತಮ್ಮ ತಂಡದ ಸಹಯೋಗದೊಂದಿಗೆ ಬಾಳೂರು ಮೊರಾರ್ಜಿ ಶಾಲೆ,ಕೋಳೂರು ಮೊರಾರ್ಜಿ ಶಾಲೆ ಸೇರಿದಂತೆ ಅನೇಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಾನಪದ ಗೀತೆಯನ್ನು ಹೇಳಿಕೊಟ್ಟಿದ್ದಾರೆ. ಹಲವಾರು ಸಮಾಜಮುಖಿ ಕೆಲಸದಲ್ಲೂ ಭಾಗಿಯಾಗಿದ್ದಾರೆ.ಜಾನಪದ ಕಲೆಯ ಮೇಲೆ ರವಿ ಅವರಿಗೆ ಇರುವ ಆಸಕ್ತಿ ಮತ್ತು ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಯುವ ಪ್ರಶಸ್ತಿ ನೀಡಿರುವುದು ಪ್ರಯತ್ನಕ್ಕೆ ಸಿಕ್ಕ ಪ್ರತಿಫಲವಾಗಿದೆ.
ರವಿಯವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವುದಕ್ಕೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು, ಊರಿನ ಹಿರಿಯರು,ಕುಟುಂಬಸ್ಥರು,ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.