“ಕೆ.ಪಿ.ಪಿ.ಟ್ರಸ್ಟಿನಲ್ಲಿ ನಾಳೆ ಆಕಾಶಕಾಯಗಳ ವೀಕ್ಷಣೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ದಿನಾಂಕ 06/02/2024ರ ಮಂಗಳವಾರದಂದು ಆಕಾಶ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವು ಸಂಜೆ 06ಗಂಟೆಗೆ ಆರಂಭವಾಗಲಿದ್ದು,ಮಂಡ್ಯ ಜಿಲ್ಲಾ ವಿಜ್ಞಾನ ವೇದಿಕೆಯ ಲೋಕೇಶ್ ಎಸ್.,ನಂಜರಾಜು ಸಿ.ಎಲ್.ಅವರು ಸುಮಾರು 50 ಆಕಾಶ ಕಾಯಗಳ ಕುರಿತು ವಿವರಣೆ ನೀಡಲಿದ್ದಾರೆ.ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ.ಪ್ರವೇಶ ಉಚಿತವಾಗಿದ್ದು,ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಬಹುದಾಗಿದ್ದು,ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು (ದೂ:08263200012,ಮೊ:9663098873)ಸಂಪರ್ಕಿಸಬಹುದು ಎಂದು ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.