AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಅಡ್ಯನಡ್ಕ ಕರ್ಣಾಟಕ ಬ್ಯಾಂಕಿನಲ್ಲಿ ಕಳ್ಳತನ : ಆರೋಪಿಗಳಿಬ್ಬರ ಬಂಧನ.”

1 min read

ಇತ್ತೀಚೆಗೆ ವಿಟ್ಲ ಸಮೀಪದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಶಾಖೆಯಲ್ಲಿ ನಡೆದ ಕಳ್ಳತನದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸ್‌ ಇಲಾಖೆಯ ವಿಶೇಷ ತಂಡ ಅಕ್ಕಪಕ್ಕದಲ್ಲಿರುವ ಎಲ್ಲ ಸಿಸಿ ಕೆಮರಾ ದೃಶ್ಯಾವಳಿಯನ್ನು ಸಂಗ್ರಹಿಸಿ ವಾಹನದ ನಿಖರತೆಯನ್ನು ಪಡೆಯುವ ನಿಟ್ಟಿನಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದೆ.ಇಬ್ಬರನ್ನು ವಶಕ್ಕೆ ಪಡೆದು ಆರೋಪಿಗಳ ಮಾಹಿತಿಯನ್ನು ಸಂಗ್ರಹಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.ಭಾರೀ ಮೊತ್ತದ ಕಳ್ಳತನದ ಬಳಿಕ ಕಳ್ಳರು ನುಗ್ಗಿದ ಕಿಟಕಿಯನ್ನು ಸಂಪೂರ್ಣ ಬಂದ್‌ ಮಾಡಿದ್ದಾರೆ.

ಕಳ್ಳತನದಲ್ಲಿ ಸಾರಡ್ಕ ರಾಮ ಭಟ್,ನೆಗಳಗುಳಿ ಶ್ರೀಪತಿ ಭಟ್‌ ಅವರ ವೈಯಕ್ತಿಕ ಲಾಕರ್‌ಗಳು ತೆರೆಯಲ್ಪಟ್ಟಿವೆ. ಬ್ಯಾಂಕ್‌ನ ಹಿಂಭಾಗದಲ್ಲಿರುವ ಕಿಟಕಿ ನೇರವಾಗಿ ಯಾರಿಗೂ ಕಾಣುವ ಹಾಗಿಲ್ಲ. ಹಳೆಯ ಆರೋಗ್ಯ ಕೇಂದ್ರದ ಕಟ್ಟಡದ ಬದಿಯಿಂದ ಅಡ್ಯನಡ್ಕ ಪೇಟೆಯಿಂದ ಉಳಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಕಾಲು ದಾರಿ ಇದ್ದು, ಈ ದಾರಿಯಲ್ಲಿ ಸಂಚರಿಸಿ ಬ್ಯಾಂಕ್‌ ನ ಸಮಗ್ರ ಮಾಹಿತಿಯನ್ನು ಕಳ್ಳರು ಮೊದಲೇ ಸಂಗ್ರಹಿಸಿರುವ ಸಾಧ್ಯತೆಗಳಿದೆ ಎಂದು ಊಹಿಸಲಾಗಿದೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

 

About Author

Leave a Reply

Your email address will not be published. Required fields are marked *