“ಕರವೇ ಪ್ರಾನ್ಸಿಸ್ ಡಿಸೋಜ ರವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ.”
1 min read
ನಾಟ್ಯಮಯೂರಿ ನೃತ್ಯ ಶಾಲೆ ಗೋಣಿಕೊಪ್ಪ ಈ ಸಂಸ್ಥೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,ತುಂಬಾ ಸುಂದರವಾಗಿ ಕಾರ್ಯಕ್ರಮ ಮೂಡಿ ಬಂದಿದೆ.ನೃತ್ಯ ಶಿಕ್ಷಕಿ ಪ್ರೇಮಾಂಜಲಿ ಅವರ ನೇತೃತ್ವದಲ್ಲಿ ಮಕ್ಕಳ ನೃತ್ಯ ಮನಸ್ಸಿಗೆ ತೃಪ್ತಿ ಉಂಟಾಗುವಂತಹ ಕಾರ್ಯಕ್ರಮವಾಗಿ ಮೂಡಿಬಂದಿದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲೆಯ,ಸೋಮವಾರಪೇಟೆ ತಾಲ್ಲೂಕಿನ, ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಪ್ರಾನ್ಸಿಸ್ ಡಿಸೋಜ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರಾನ್ಸಿಸ್ ಡಿಸೋಜ ಮಾತನಾಡಿ,ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂದಿದ್ದು,ಒಬ್ಬ ಕನ್ನಡ ಭಾಷೆಯ ಸೇವಕನಾದ ನನ್ನನ್ನು ಗುರುತಿಸಿ ಗೌರವಿಸಿದ ನಿಮಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.ಈ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು,ಕಲಾ ಪ್ರೇಮಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.