लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಮತ್ತೆ ಮೂಡಿಗೆರೆಯಲ್ಲಿ ಕಮಲದ ಒಳಗೆ ಮೂಡಿದ ಬಿರುಕು : ಯಾರಿಗೆ ಲಾಭ,ಯಾರಿಗೆ ನಷ್ಟ.”

1 min read

ಮೂಡಿಗೆರೆ ತಾಲ್ಲೂಕು ಬಿ.ಜೆ.ಪಿ.ಯೊಳಗೆ ಅಸಮಧಾನದ ಬೇಗುದಿ ಭುಗಿಲೆದ್ದಿದೆ. ಪಕ್ಷದ ಇಬ್ಬರು ನಾಯಕರನ್ನು ಸಸ್ಪೆಂಡ್ ಮಾಡಿರುವ ವಿಚಾರ ಈಗ ಪಕ್ಷದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ.

ಇತ್ತೀಚೆಗೆ ಮೂಡಿಗೆರೆ ಪಟ್ಟಣದಲ್ಲಿ ಬಿ.ಜೆ.ಪಿ. ಕಛೇರಿ ಎದುರು ನಡೆದಿದ್ದ ಗಲಾಟೆ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಅವರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಬಿ.ಜೆ.ಪಿ.ಯ ಇಬ್ಬರು ಹೋಬಳಿ ಅಧ್ಯಕ್ಷರುಗಳನ್ನು ಅಮಾನತು ಮಾಡಲಾಗಿದೆ.

 

ಬಣಕಲ್ ಹೋಬಳಿ ಅಧ್ಯಕ್ಷ ಮತ್ತು ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯ ಪಿ.ಜಿ. ಅನುಕುಮಾರ್ (ಪಟ್ಟದೂರು ಪುಟ್ಟಣ್ಣ) ಹಾಗೂ ಗೋಣಿಬೀಡು ಹೋಬಳಿ ಅಧ್ಯಕ್ಷ ಕನ್ನೇಹಳ್ಳಿ ಭರತ್ ಇವರುಗಳನ್ನು ಜಿಲ್ಲಾ ಅಧ್ಯಕ್ಷರು ಪಕ್ಷದಿಂದ ಅಮಾನತು ಮಾಡಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಈ ಇಬ್ಬರು ಮುಖಂಡರುಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವೀಗ ಮೂಡಿಗೆರೆ ಬಿ.ಜೆ.ಪಿ.ಯೊಳಗೆ ದೊಡ್ಡ ಬೇಗುದಿ ಸೃಷ್ಟಿಸಿದೆ. ಅಮಾನತು ಮಾಡಿರುವ ಕ್ರಮ ಸರಿಯಲ್ಲ, ಯಾವುದೇ ನೋಟೀಸ್ ನೀಡದೇ, ವಿವರಣೆ ಕೇಳದೇ, ಪ್ರಕರಣದ ತನಿಖೆ ನಡೆಸದೇ ಏಕಾಏಕಿ ಅಮಾನತು ಮಾಡಲಾಗಿದೆ ಎಂದು ಅನುಕುಮಾರ್ ಮತ್ತು ಭರತ್ ಅವರನ್ನು ಬೆಂಬಲಿಸಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ದೊಡ್ಡ ಪಡೆ ತಮ್ಮ ಅಸಮದಾನ ಹೊರಹಾಕಿದ್ದಾರೆ.

ಈ ಸಂಬಂಧ ಬುಧವಾರ ಸಂಜೆ ಪಿ.ಜಿ. ಅನುಕುಮಾರ್ ಅವರ ಪಟ್ಟದೂರು ಗ್ರಾಮದ ನಿವಾಸದಲ್ಲಿ ಸಭೆ ಸೇರಿದ್ದ ಸುಮಾರು 200ಕ್ಕೂ ಅಧಿಕ ಬಿ.ಜೆ.ಪಿ. ಮುಖಂಡರು ಮತ್ತು ಕಾರ್ಯಕರ್ತರು ಅನುಕುಮಾರ್ ಮತ್ತು ಭರತ್ ಅವರಿಗೆ ತಮ್ಮ ನೈತಿಕ ಬೆಂಬಲ ಸೂಚಿಸಿದ್ದಾರೆ ಮತ್ತು ಅಮಾನತು ಮಾಡಿರುವ ಜಿಲ್ಲಾಧ್ಯಕ್ಷರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಸಭೆಯಲ್ಲಿ ತಾಲ್ಲೂಕಿನ ಅನೇಕ ಹಿರಿಯ ಬಿ.ಜೆ.ಪಿ. ಮುಖಂಡರು, ಪಕ್ಷದ ಬಹುತೇಕ ಸಕ್ರಿಯ ಕಾರ್ಯಕರ್ತರು ಭಾಗವಹಿಸಿ ಅಮಾನತಾಗಿರುವ ಮುಖಂಡರುಗಳನ್ನು ಬೆಂಬಲಿಸಿ ಮಾತನಾಡಿದ್ದಾರೆ. ಈ ಬಗ್ಗೆ ಪ್ರಬಲವಾದ ಪ್ರತಿಭಟನೆ ಸೂಚಿಸಲು ತೀರ್ಮಾನಿಸಿದ್ದಾರೆ. ಅನುಕುಮಾರ್ ಮತ್ತು ಭರತ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷದ ವಿಚಾರದಲ್ಲಿ ಮುಂದೆ ನಿಂತು ಹೋರಾಟ ಮಾಡಿದ್ದಾರೆ. ಉತ್ತಮ ಜನಸಂಪರ್ಕ ಹೊಂದಿದ್ದಾರೆ. ಅವರನ್ನು ಯಾವುದೇ ಮಾರ್ಗಸೂಚಿ ಅನುಸರಿಸಿದೇ, ಕನಿಷ್ಟ ಅವರಿಂದ ವಿವರಣೆಯನ್ನು ಕೇಳದೇ ಏಕಾಏಕಿ ಜಿಲ್ಲಾಧ್ಯಕ್ಷರು ಅಮಾನತು ಮಾಡಿರುವ ಕ್ರಮವನ್ನು ಪಕ್ಷದ ಮುಖಂಡ ವಿ.ಕೆ.ಶಿವೇಗೌಡ ಸೇರಿದಂತೆ ಅನೇಕರು ಖಂಡಿಸಿದ್ದಾರೆ.

ಈ ವಿಚಾರದಲ್ಲಿ ಜಿಲ್ಲೆ ಮತ್ತು ರಾಜ್ಯಮಟ್ಟದ ವರೆಗೆ ಹೋರಾಟ ಮಾಡಲು ಕಾರ್ಯಕರ್ತರು ಸಿದ್ದರಿದ್ದೇವೆ, ಅಮಾನತು ವಾಪಾಸ್ಸು ಪಡೆಯಬೇಕು. ಇಲ್ಲದೇ ಇದ್ದರೆ ಮುಂದೆ ಕಠಿಣ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ಸಭೆಯಲ್ಲಿ ಸೇರಿದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಈ ಇಬ್ಬರು ಮುಖಂಡರುಗಳಿಗೆ ಬೆಂಬಲ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ “We stand with you Puttu & Bharath” ಎಂದು ಅಭಿಯಾನ ಆರಂಭಿಸಿದ್ದಾರೆ.

ಒಟ್ಟಾರೆ ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರ ನಡೆಯ ವಿರುದ್ಧ ಮೂಡಿಗೆರೆಯಲ್ಲಿ ಬಿ.ಜೆ.ಪಿ.ಯ ಪ್ರಬಲ ಪಡೆ ತಿರುಗಿ ಬಿದ್ದಿದ್ದು, ಪಕ್ಷದ ಮುಖಂಡರು ಈ ಪ್ರಕರಣವನ್ನು ಯಾವ ರೀತಿ ನಿಭಾಯಿಸುತ್ತಾರೆ ಕಾದು ನೋಡಬೇಕಾಗಿದೆ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *