“ಬಿಡಾಡಿ ದಿನಗಳ ಸ್ಥಳಾಂತರ ಮಾಡಿ : ಹೊಯ್ಸಳಲು ಸುಂದರೇಶ್.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪಟ್ಟಣ ಸೇರಿದಂತೆ ಹಳೇಮೂಡಿಗೆರೆ ಗ್ರಾ.ಪಂ.ವ್ಯಾಪ್ತಿಯ ಹ್ಯಾಂಡ್ಪೋಸ್ಟ್ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿಡಾಡಿ ಜಾನುವಾರುಗಳು ಉಪಟಳ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ಜಾನುವಾರುಗಳನ್ನು ಸ್ಥಳಾಂತರಿಸಬೇಕೆಂದು ಹೊಯ್ಸಳಲು ಸುಂದರೇಶ್ ಒತ್ತಾಯಿಸಿದ್ದಾರೆ.
ಅವರು ದಿನಾಂಕ 27/02/2024ರ ಮಂಗಳವಾರದಂದು ವಾಹಿನಿಯೊಂದಿಗೆ ಮಾತನಾಡಿ,ಹ್ಯಾಂಡ್ಪೋಸ್ಟ್ ಹಾಗೂ ಕಿತ್ತಲೆಗಂಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ಸುಮಾರು 30 ರಿಂದ 40 ಬಿಡಾಡಿ ಜಾನುವಾರುಗಳು ರಸ್ತೆಯಲ್ಲಿ ಸಂಚರಿಸುತ್ತಾ,ವಾಹನ ಸಂಚಾರಕ್ಕೆ ತೊಡಕುಂಟು ಮಾಡುತ್ತಿದೆ.ರಾತ್ರಿ ಹೊತ್ತಲ್ಲಿ ರಸ್ತೆ ಮದ್ಯೆ ಮಲಗುವುದರಿಂದ ವಾಹನ ಸವಾರರು ಜೀವ ಭಯದಿಂದ ತಿರುಗಾಡುವಂತಾಗಿದೆ.ಅಲ್ಲದೇ ಅಪಘಾತಗಳು ಸಂಭವಿಸುತ್ತಲೇ ಇದೆ.ಈ ಬಗ್ಗೆ ಈ ಹಿಂದೆ ಚಿಕ್ಕಮಗಳೂರಿನಲ್ಲಿ ನಡೆದ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆಯಲ್ಲಿ ಡಿಸಿ ಹಾಗೂ ಎಸ್ಪಿ ಅವರ ಗಮನಕ್ಕೆ ತರಲಾಗಿತ್ತು.ಈ ವಿಚಾರವಾಗಿ ಗ್ರಾ.ಪಂ.ಗೆ ನೋಟೀಸು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.ಕೂಡಲೇ ಗ್ರಾ.ಪಂ. ಅಧಿಕಾರಿಗಳು ಎಚ್ಚೆತ್ತುಕೊಂಡು ಜಾನುವಾರು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು.ವಾರಸುದಾರರು ಯಾರೂ ಇಲ್ಲದಿದ್ದರೆ ಅವುಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.