ಮೂತ್ರ ವಿಸರ್ಜನೆಗೆ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಸಾವು
1 min readಮೂತ್ರ ವಿಸರ್ಜನೆಗೆ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಸಾವು
ಮೂಡಿಗೆರೆ: ಮೂತ್ರ ವಿಸರ್ಜನೆಗೆ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಬೆಂಗಳೂರಿನ ಕಲಾಸಿ ಪಾಳ್ಯದ ಮಧು ಸೂದನ್ (57) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಮಧು ಸೂದನ್ ಕೊಟ್ಟಿಗೆಹಾರದ ಕೆ ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್ ನಲ್ಲಿರುವ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆಂದು ತೆರಳಿದ್ದಾರೆ. ಈ ವೇಳೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.