लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಮೂಡಿಗೆರೆ ಕ್ಷೇತ್ರದ ಕಮಲದಲ್ಲಿ ದಿನೇ ದಿನೇ ಹೆಚ್ಚಿದ ಬಿರುಕು : ಯಾರಿಗೆ ಲಾಭ ; ಯಾರಿಗೆ ಪ್ರತಿಷ್ಠೆ.”

1 min read

ಬಿಜೆಪಿಯಲ್ಲಿ ಉಂಟಾಗಿರುವ ಬಿರುಕು ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ.ಬಿಜೆಪಿ ಮಂಡಲ ಅಧ್ಯಕ್ಷರ ಆಯ್ಕೆಯ ಸಂಬಂಧ ಪಕ್ಷದೊಳಗೆ ಉದ್ಭವಿಸಿರುವ ಗೊಂದಲ ಮುಂದುವರಿದಿದೆ.ಇದೀಗ ದಿನಾಂಕ 15/03/2024ರ ಶುಕ್ರವಾರ ನಡೆಯಲಿರುವ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮೇಲೂ ಇದರ ಕರಿನೆರಳು ಬಿದ್ದಿದೆ.

ನಾಳೆ ಮೂಡಿಗೆರೆ ಬಿಜೆಪಿ ಕಚೇರಿಯಲ್ಲಿ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿದೆ.ಈ ಸಮಾರಂಭಕ್ಕೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಭರ್ಜರಿ ತಯಾರಿಯನ್ನು ನಡೆಸಲಾಗಿದೆ. ಮಂಡಲ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಮತ್ತು ಅವರ ತಂಡದ ಸದಸ್ಯರು ನಾಳೆ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಇತ್ತ ಮಂಡಲ ಅಧ್ಯಕ್ಷರ ಆಯ್ಕೆಯ ವಿಚಾರವಾಗಿ ಮೂಡಿಗೆರೆ ತಾ.ಪಂ.ಮಾಜಿ ಅಧ್ಯಕ್ಷ ಕೆ.ಸಿ.ರತನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿತರಾಗಿರುವ ಬಣಕಲ್ ಹೋಬಳಿ ಬಿಜೆಪಿ ಅಧ್ಯಕ್ಷ ಪಿ.ಜಿ.ಅನುಕುಮಾರ್ ಪಟ್ಟದೂರು ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರುಗಳ ನೇತೃತ್ವದಲ್ಲಿ ಮೂಡಿಗೆರೆ ಪ್ರೀತಂ ಹಾಲ್ ನಲ್ಲಿ ಬಿಜೆಪಿ ಚಿಹ್ನೆಯಡಿಯೇ “ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾದ ಪ್ರಚಾರವನ್ನು ನೀಡಲಾಗುತ್ತಿದೆ.ಪಿ.ಜಿ.ಅನುಕುಮಾರ್ ಅವರು ಕೆ.ಸಿ.ರತನ್ ಅವರನ್ನು ಕುರಿತು ಮಾತನಾಡಿರುವ ಆಡಿಯೋ ಒಂದು ಸಹ ವ್ಯಾಪಕವಾಗಿ ಹರಿದಾಡುತ್ತಿದೆ. ನಾಳಿನ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದ ಹೆಸರಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೂ ಪಕ್ಷದ ಒಂದು ಗುಂಪು ಸಾಕಷ್ಟು ತಯಾರಿ ನಡೆಸಿದ್ದು,ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಕಾರ್ಯಕರ್ತರ ಗೋಳು ಕೇಳುವವರಾರು?.

ಪಕ್ಷದೊಳಗೆ ನಡೆಯುತ್ತಿರುವ ಈ ಘಟನಾವಳಿಗಳು ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಗೊಂದಲ ಮೂಡಿಸಿದೆ. ಯಾವ ಕಾರ್ಯಕ್ರಮಕ್ಕೆ ಹೋಗುವುದು ? ಎಂಬ ಇಕ್ಕಟ್ಟಿನಲ್ಲಿ ಕಾರ್ಯಕರ್ತರು ಸಿಲುಕಿರುವುದು ಅವರ ಭಾವನೆಗಳಿಂದ ತಿಳಿದುಬರುತ್ತಿದೆ.ಅತ್ತ ಹೋದರೆ ಇವರಿಗೆ ಸಿಟ್ಟು,ಇತ್ತ ಹೋದರೆ ಅವರಿಗೆ ಸಿಟ್ಟು ಎಂಬ ರೀತಿಯಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಏರ್ಪಟ್ಟಿದೆ.ಒಟ್ಟಾರೆ ನಾಳೆ ಮೂಡಿಗೆರೆ ಬಿಜೆಪಿಯೊಳಗೆ ಎರಡು ಬಣಗಳು ಪರಸ್ಪರರು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು ಮತ್ತೊಂದು ಹೈಡ್ರಾಮಕ್ಕೆ ವೇದಿಕೆ ಸಜ್ಜಾಗಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *