ಕಾರ್ಯಕಾರಿ ಸಮಿತಿ ಹಾಗೂ ವಿಧಾನ ಪರಿಷತ್ ಚುನಾವಣೆ ತಯಾರಿ ಸಭೆ* ಯನ್ನು ಇಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಏರ್ಪಡಿಸಲಾಗಿತ್ತು
1 min read
*ಕಾರ್ಯಕಾರಿ ಸಮಿತಿ ಹಾಗೂ ವಿಧಾನ ಪರಿಷತ್ ಚುನಾವಣೆ ತಯಾರಿ ಸಭೆ* ಯನ್ನು ಇಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಏರ್ಪಡಿಸಲಾಗಿತ್ತು. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ *ಶ್ರೀ ಡಾ. ಕೆ ಕೆ ಮಂಜುನಾಥ್* ಹಾಗೂ *ಶ್ರೀ ಆಯನೂರು ಮಂಜುನಾಥ್* ಅವರನ್ನು ಗೆಲ್ಲಿಸಲು ಪಕ್ಷವು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಆ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜವಬ್ದಾರಿಗಳೇನು ಎಂಬುದರ ಬಗ್ಗೆ ಹಿರಿಯ ನುರಿತ ಮುಖಂಡರುಗಳು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ ಜೆ ಜಾರ್ಜ್ ಅವರು, ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪನವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಭಂಡಾರಿ ಅವರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ ಎಲ್ ಶಂಕರ್ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ ಪಿ ಅಂಶುಮಂತ್ ಅವರು ಮೂಡಿಗೆರೆ ಶಾಸಕರಾದ ಶ್ರೀಮತಿ ನಯನ ಮೋಟಮ್ಮನವರು, ಕಡೂರು ಶಾಸಕರಾದ ಶ್ರೀ ಕೆ ಎಸ್ ಆನಂದ್ ಅವರು, ಚಿಕ್ಕಮಗಳೂರು ಶಾಸಕರಾದ ಶ್ರೀ ಹೆಚ್ ಡಿ ತಮ್ಮಯ್ಯ ಅವರು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಎ ವಿ ಗಾಯಿತ್ರಿ ಶಾಂತೇಗೌಡ ಅವರು, ಮಾಜಿ ಮಂತ್ರಿಗಳಾದ ಶ್ರೀ ಬಿ ಬಿ ನಿಂಗಯ್ಯನವರು, ಮಾಜಿ ಶಾಸಕರಾದ ಶ್ರೀ ಎಂ ಪಿ ಕುಮಾರಸ್ವಾಮಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ ಎಲ್ ವಿಜಯ್ ಕುಮಾರ್ ಅವರು ಮತ್ತು ಶ್ರೀಮತಿ ರೇಖಾ ಹುಲಿಯಪ್ಪ ಗೌಡ ಅವರು ಹಾಗೂ ಪಕ್ಷದ ಪ್ರಮುಖ ಮುಖಂಡರು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ನಾಯಕರು ಉಪಸ್ಥಿತರಿದ್ದರು.