AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಿಜೆಪಿಯಿಂದ ವಿಜಯೋತ್ಸವ

ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬಹುಮತ ಪಡೆದು ವಿಜೇತರಾಗಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮುಂತಾದ ಕಡೆಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕ ಸಭೆ ಚುನಾವಣೆಯಲ್ಲಿ 634786 ಮತ ಪಡೆದು  ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗಿಂತ 219695 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿಯವರು ಬಡ ಕುಟುಂಬದಿಂದ ಬಂದಿದ್ದು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಿದ್ದಾರೆ ಎಂಬ ಆಶಾಭಾವನೆ ವ್ಯಕ್ತ ಪಡಿಸಿದರು.
ಬಿಜೆಪಿ ಮುಖಂಡರು,ಕಾರ್ಯಕರ್ತರು ಲೋಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಸಿ ವಿಜೇತರಾದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಬಳಿಕ ಪಟಾಕಿ ಕಸವನ್ನು ಗುಡಿಸುವುದರ ಮೂಲಕ ಸ್ವಚ್ಚಗೊಳಿಸಿದರು.

About Author

Leave a Reply

Your email address will not be published. Required fields are marked *